ಮೈಸೂರು: ‘ಹೊಸ ವರ್ಷದಲ್ಲಿ ಜಂಟಿ ಅಧಿವೇಶನ ಕಡ್ಡಾಯವಾಗಿ ಕರೆಯಬೇಕೆಂದು ಸಂವಿಧಾನ ಸ್ಪಷ್ಟವಾಗಿ ಹೇಳಿದೆ. ಅದಕ್ಕಾಗಿ ಕರೆದಿದ್ದೇವೆ’ ಎಂದು ‘ಅಧಿವೇಶನ ಕರೆದಿರುವುದು ರಾಜಕೀಯ ದುರ್ಬಳಕೆ’ ಎಂಬ ಬಿಜೆಪಿ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇದನ್ನೂ ಓದಿ : ಮಹಾರಾಷ್ಟ್ರ| ಮತದಾನವಿಲ್ಲದೆ ಚುನಾವಣೆಗಳು ನಡೆಯುವ ಏಕೈಕ ಪ್ರಜಾಪ್ರಭುತ್ವ – ನಟ ಕಿಶೋರ್
ಮನರೇಗಾ ಮರುಸ್ಥಾಪಿಸಬೇಕು ಎನ್ನುವುದು ನಮ್ಮ ಒತ್ತಾಯವಾಗಿದೆ. ಮ–ನರೇಗಾ ಮೂಲಕ ಗ್ರಾಮೀಣರಿಗೆ ಉದ್ಯೋಗ ಖಾತ್ರಿ ಇತ್ತು. ಶಿಕ್ಷಣ, ಮಾಹಿತಿ ಹಾಗೂ ಆಹಾರ ಭದ್ರತೆ ತಂದಿದ್ದು ಯುಪಿಎ ಸರ್ಕಾರ. ಅದನ್ನು ಹಾಳು ಮಾಡಲು ಹೊರಟಿಸುವುದನ್ನು ಖಂಡಿಸಲು ವಿಶೇಷ ಅಧಿವೇಶನ ಕರೆಯಲಾಗಿದೆ. ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್–ಗ್ರಾಮೀಣ (ವಿಬಿ–ಜಿ ರಾಮ್ ಜಿ) ಸರಿಯಲ್ಲ ಎನ್ನುವುದು ಎನ್ನುವುದು ನಮ್ಮ ನಿಲುವಾಗಿದೆ’ ಎಂದು ಹೇಳಿದರು.
ಇದನ್ನೂ ನೋಡಿ : ಎರಡು ವರ್ಷ ಏಳು ತಿಂಗಳುಗಳ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು, ಮುಂದಿನ ಜವಾಬ್ದಾರಿಗಳು… Janashakthi Media
