ಕಲುಷಿತ ನೀರು ಕುಡಿದು 3 ವಿದ್ಯಾರ್ಥಿಗಳು ಅಸ್ವಸ್ಥ| ಆಸ್ಪತ್ರೆಗೆ ದಾಖಲು!

ಬಂಗಾರಪೇಟೆ: ಕುಲುಷಿತ ನೀರು ಕುಡಿದು ಮೂವರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ದೊಡ್ಡಪೊನ್ನಾಂಡಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ. ವಿದ್ಯಾರ್ಥಿಗಳು
ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಗಿರಿಶ್, ಧನು ಮತ್ತು ಡಂಕಣಾಚಾರಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳು. ಸೋಮವಾರ ಬೆಳಗ್ಗೆ ತಿಂಡಿ ತಿಂದ ಬಳಿಕ ಎಂದಿನಂತೆ ನೀರು ಕುಡಿದಾಗ ಈ ಘಟನೆ ನಡೆದಿದೆ.

ಇದನ್ನೂ ಓದಿ:ಹೊಟ್ಟೆ ನೋವು: ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು

ನೀರು ಕುಡಿದು ಅಸ್ವಸ್ಥರಾದ ಮಕ್ಕಳು

ಸೋಮವಾರ ವಸತಿ ಶಾಲೆಯಲ್ಲಿರುವ ಸುಮಾರು ೨೫೦ಕ್ಕೂ ಹೆಚ್ಚಿನ ಮಕ್ಕಳು ಬೆಳಗ್ಗಿನ ತಿಂಡಿ ಮುಗಿದ ಬಳಿಕ ಅಲ್ಲಲ್ಲಿ ಅಳವಡಿಸಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಮಕ್ಕಳು ನೀರು ಕುಡಿದರು. ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಶುದ್ಧ ನೀರಿನ ಒಂದು ಘಟಕದಲ್ಲಿ ನೀರು ಕುಡಿದ ಮೂವರು ಮಕ್ಕಳು ಮಾತ್ರ ವಾಂತಿ, ಭೇದಿ ಮಾಡಿಕೊಂಡು ಅಸ್ವಸ್ಥರಾದರು.

Donate Janashakthi Media

Leave a Reply

Your email address will not be published. Required fields are marked *