40 ಪರ್ಸೆಂಟ್ ಕಮಿಷನ್ ಗೆ ಮತ್ತೊಂದು ಬಲಿ : ಗುತ್ತಿಗೆದಾರ ಟಿ.ಎನ್.ಪ್ರಸಾದ್ ಆತ್ಮಹತ್ಯೆ

ತುಮಕೂರು : ಬೆಳಗಾವಿಯ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ  ಮಾಡಿಕೊಂಡ ಬೆನ್ನಲ್ಲೇ ಇದೀಗ ತುಮಕೂರಿನಲ್ಲಿ ಮತ್ತೋರ್ವ ಗುತ್ತಿಗೆದಾರ  ನೇಣಿಗೆ ಶರಣಾಗಿದ್ದಾರೆ. ತುಮಕೂರು ತಾಲೂಕಿನ ದೇವರಾಯನದುರ್ಗದ ಪ್ರವಾಸಿ ಮಂದಿರದಲ್ಲಿ  ಇಂದು(ಡಿಸೆಂಬರ್ 30) ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಗುತ್ತಿಗೆದಾರ ಟಿ.ಎನ್.ಪ್ರಸಾದ್(50)ಎನ್ನುವರ ಶವ ಪತ್ತೆಯಾಗಿದೆ.

ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಕಾರಣ ತಿಳಿದುಬಂದಿಲ್ಲ. ಆದರೂ ಕಾಮಗಾರಿ ಮಾಡಿಸಲು ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದರು. ಸರ್ಕಾರ ಕಾಮಗಾರಿ ಹಣವನ್ನು ಬಿಡುಗಡೆ ಮಾಡಿರಲಿಲ್ಲ ಎಂದು ಹೇಳಲಾಗಿದೆ. 40 ಪರ್ಸೆಂಟ್ ಕಮಿಷನ್ ಗುತ್ತಿಗೆದಾರರನ್ನು ಬಲಿ ಪಡೆದಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಲರಾಮ್ ಭೇಟಿ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ಗುತ್ತಿಗೆದಾರರಿಗೆ ಕೆಲಸ ಮಾಡಿದ ಬಿಲ್ ಗಳನ್ನು ಅಧಿಕಾರಿಗಳು ಸರಿಯಾಗಿ ಮಾಡಿಕೊಡುವುದಿಲ್ಲ. ರಾಜ್ಯದ ಭ್ರಷ್ಟ ಆಡಳಿತ ವ್ಯವಸ್ಥೆ ಇಂತಹ ಪ್ರಕರಣಕ್ಕೆ ಕಾರಣ ಎಂದು ಆರೋಪಿಸಿದ್ದಾರೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *