ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಕಮಿಷನ್ ಆರೋಪ!?

ಹುಬ್ಬಳ್ಳಿ : ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಕಮಿಷನ್ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಪ್ರಧಾನಿ ಕಚೇರಿ ಕದ ತಟ್ಟುವ ಸಾಧ್ಯತೆ ಇದೆ ಎನ್ನಲಾಗುತ್ತದೆ.

ಹುಬ್ಬಳ್ಳಿ ವಿದ್ಯುತ್‌ ಸರಬರಾಜು ಮಂಡಳಿ (ಹೆಸ್ಕಾಂ) ಅಧಿಕಾರಿಗಳ ವಿರುದ್ಧ ಕಮಿಷನ್‌ ಆರೋಪ ಕೇಳಿಬಂದಿದೆ. ಯಾವುದೇ ಗುತ್ತಿಗೆ ಪಡೆಯಬೇಕಾದರೆ ಶೇಕಡಾ25 ಕಮಿಷನ್‌ ನೀಡಬೇಕು ಎಂದು ಅನುಮತಿ ಪಡೆದ ರಾಜ್ಯ ಗುತ್ತಿಗೆದಾರರ ಸಂಘ ಗಂಭೀರ ಆರೋಪ ಮಾಡಿದೆ. ಈ ಬಗ್ಗೆ ಸರಕಾರ ಮತ್ತು ಹೆಸ್ಕಾಂ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

ಈ ಬಗ್ಗೆ ಇಂದು(ನವೆಂಬರ್ 24) ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದ ಹೆಸ್ಕಾಂ ಗುತ್ತಿಗೆದಾರರು, 25% ಕಮಿಷನ್ ಪಡೆದು ಹೊರ ರಾಜ್ಯದ ಗುತ್ತಿಗೆದಾರರಿಗೆ 472ಕೋಟಿ ರೂ. ಟೆಂಡರ್ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

472ಕೋಟಿ ಟೆಂಡರ್ ಗೆ 25% ಕಮಿಷನ್ ಪಡೆದುಕೊಂಡಿದ್ದಾರೆ. ರಾಜ್ಯದ ಗುತ್ತಿಗೆದಾರರಿಗೆ ಟೆಂಡರ್ ನೀಡಿದ್ದರೆ ಸುಮಾರು 3000 ಗುತ್ತಿಗೆದಾರರಿಗೆ ಕಲಸ ಸಿಗುತ್ತಿತ್ತು. ಇದನ್ನೆಲ್ಲ ಬಿಟ್ಟು ಕಮಿಷನ್ ಆಸೆಗೆ ಕೇವಲ 40 ಜನರಿಗೆ ಟೆಂಡರ್ ನೀಡಿದ್ದಾರೆ. ಈ ಎಲ್ಲಾ ಭ್ರಷ್ಟಾಚಾರಕ್ಕೆ ಹೆಸ್ಕಾಂ ಎಂ.ಡಿ ಡಿ. ಭಾರತಿ ಮತ್ತು ತಾಂತ್ರಿಕ ನಿರ್ದೇಶಕ ಶ್ರೀಕಾಂತ ಸಸಾಲೊಟ್ಟಿ ಕಾರಣ ಎಂದು ಆರೋಪ ಮಾಡಿದ್ದಾರೆ.

ಈ ಹಿಂದೆ ರಾಜ್ಯ ಬಿಜೆಪಿ ಸರ್ಕಾರ ವಿರುದ್ಧ 40% ಕಮೀಷನ್ ಆರೋಪ ದೇಶದಲ್ಲಿ ಭಾರೀ ಸದ್ದು ಮಾಡಿತ್ತು. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬೊಮ್ಮಾಯಿ ಸರ್ಕಾರ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದರು. ಅಲ್ಲದೇ ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದು, ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯ ಸರಕಾರಕ್ಕೆ ಬಿಸಿ ತುಪ್ಪವಾಗಿದೆ.

Donate Janashakthi Media

Leave a Reply

Your email address will not be published. Required fields are marked *