ಕೋವಿಡ್‌ ಲಸಿಕೆ! ಸನ್ನದ್ಧವಾಗಿರಲು ಮುಖ್ಯಮಂತ್ರಿಗಳಿಗೆ ಪ್ರಧಾನಿ ಮೋದಿ ಸೂಚನೆ

 – ದೇಶದಲ್ಲಿ 30 ಕೋಟಿ ಜನರಿಗೆ ಆದ್ಯತೆ ಮೇರೆಗೆ ಕೋವಿಡ್ 19‌ ಲಸಿಕೆ 

ಬೆಂಗಳೂರುದೇಶದಲ್ಲಿ 30 ಕೋಟಿ ಜನರಿಗೆ ಆದ್ಯತೆಯ ಮೇರೆಗೆ ಕೋವಿಡ್ 19‌ ಲಸಿಕೆ ನೀಡಲು ಎಲ್ಲಾ ರೀತಿಯ ಸಿದ್ಧತೆಗಳೊಂದಿಗೆ ತಯಾರಾಗಿರಿ ಎಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದ್ದಾರೆ.

ಮಂಗಳವಾರ ಆರು ರಾಜ್ಯಗಳ ಸಿಎಂಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಪ್ರಧಾನಿ ಮೋದಿ ಲಸಿಕೆಯನ್ನು ಸರಿಯಾದ ರೀತಿಯಲ್ಲಿ ಅಗತ್ಯವಿರುವವರಿಗೆ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಪ್ರಧಾನಿ ಮೋದಿ ವಿಡಿಯೋ ಸಂವಾದದ ಕುರಿತಾಗಿ ವಿಧಾನಸೌಧದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ. ದೇಶದಲ್ಲಿ ಒಟ್ಟು 3 ಕೋಟಿ ಜನರಿಗೆ ಲಸಿಕೆ ನೀಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಈ ಪೈಕಿ 1 ಕೋಟಿ ಆರೋಗ್ಯ ಕಾರ್ಯಕರ್ತರು, 2 ಕೋಟಿ ಕೊರೊನಾ ವಾರಿಯರ್ಸ್ ಹಾಗೂ 50 ರಿಂದ 60 ವರ್ಷ 26 ಕೋಟಿ ಜನರಿಗೆ ಆದ್ಯತೆಯಲ್ಲಿ ಲಸಿಕೆ ನೀಡಲು ಸೂಕ್ತ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಲಸಿಕೆ ವಿತರಣೆ ಮಾಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಯ ನೇತೃತ್ವದಲ್ಲಿ ರಾಜ್ಯ ಮಟ್ಟದಲ್ಲಿ ಸಮಿತಿ ರಚನೆ ಮಾಡಲಾಗುವುದು, ಅಲ್ಲದೆ ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲ್ಲೂಕು ಮಟ್ಟದಲ್ಲೂ ಸಮಿತಿ ರಚನೆ ಮಾಡುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಇದಕ್ಕಾಗಿ ಅಗತ್ಯವಿರುವ ಆರೋಗ್ಯ ಕಾರ್ಯಕರ್ತರನ್ನು ತಯಾರಿ ಮಾಡಬೇಕು ಎಂದು ಸೂಚಿಸಿದೆ.

ಕೋವಿಡ್‌ ಸೋಂಕಿತರಿಗೆ ಎರಡು ಅಥವಾ ಮೂರು ಡೋಸ್ ಪ್ರಮಾಣದಲ್ಲಿ ಲಸಿಕೆ ನೀಡಬೇಕಾಗಿ ಬರಬಹುದು. ಇದನ್ನು ಗಮನದಲ್ಲಿಡುವುದು ಅಗತ್ಯವಾಗಿರುವುದರಿಂದ ಡಿಜಿಟಲ್ ತಂತ್ರಜ್ಞಾನದ ಮೂಲಕ ಟ್ರಾಕ್ ಮಾಡುವಂತೆ ಪ್ರಧಾನಿ ಮೋದಿ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.

ಲಸಿಕೆ ಯಾವಾಗ ದೊರಕಲಿದೆ ಎಂಬುವುದು ಇನ್ನೂ ಅಧಿಕೃತವಾಗಿ ತಿಳಿದುಬಂದಿಲ್ಲ. ಇನ್ನು ಲಸಿಕೆ ನೀಡಿದಇತರ ಚಿಕಿತ್ಸೆಗಳು ನೀಡಬೇಕಿದೆ. ಲಸಿಕೆ ಸಿಗಲಿದೆ ಎಂದು ಕೋವಿಡ್‌ ವಿರುದ್ಧದ ಸಮರದಿಂದ ಹಿಂದೆ ಸರಿಯಬಾರದು ಎಂದು ಪ್ರಧಾನಿ ಎಚ್ಚರಿಕೆ ನೀಡಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *