ಬಿಜೆಪಿ ವಿರುದ್ಧ ಕರ್ನಾಟಕದ ಜನತೆಯ ನಿರ್ಣಾಯಕ ತೀರ್ಪು

ಬೆಂಗಳೂರು : ವಿಧಾನಸಭಾ ಚುನಾವಣೆಗಳಲ್ಲಿ ಕರ್ನಾಟಕದ ಜನತೆ ಬಿಜೆಪಿಯನ್ನು ನಿರ್ಣಾಯಕವಾಗಿ ತಿರಸ್ಕರಿಸಿದ್ದಾರೆ.  ಈ ಸೋಲು ಬಿಜೆಪಿ ಸರಕಾರದ ಒಟ್ಟು ದುರಾಡಳಿತ ಮತ್ತು ಭ್ರಷ್ಟಾಚಾರದ ಪರಿಣಾಮವಾಗಿದೆ ಎಂದು ಸಿಪಿಐ(ಎಂ) ಪೊಲಿಟ್‍ ಬ್ಯುರೊ ಹೇಳಿದೆ.

ಈ ತೀರ್ಪು ಸ್ವತಃ ಪ್ರಧಾನ ಮಂತ್ರಿ ಮೋದಿ ನೇತೃತ್ವದ ಚುನಾವಣಾ ಪ್ರಚಾರದ ಸಮಯದಲ್ಲಿ ನಡೆಸಿದ ನಂಜುಭರಿತ ಕೋಮು ಪ್ರಚಾರವನ್ನು ಜನರು ತಿರಸ್ಕರಿಸಿದ್ದಾರೆ ಎಂಬುದನ್ನು ತೋರಿಸುತ್ತದೆ.

ವಿಧಾನಸಭೆಯಲ್ಲಿ ಭಾರಿ ಬಹುಮತ ಗಳಿಸಿರುವ ಕಾಂಗ್ರೆಸ್‌ಗೆ ಪ್ರಬಲ ಅಧಿಕಾರಸ್ಥ-ವಿರೋಧಿ ಭಾವನೆ ಲಾಭ ತಂದಿದೆ ಎಂದಿರುವ ಸಿಪಿಐ(ಎಂ) ಪೊಲಿಟ್‍ಬ್ಯುರೊ ಬಿಜೆಪಿ ವಿರುದ್ಧದ ಈ ಬಲವಾದ  ತೀರ್ಪಿಗಾಗಿ ಕರ್ನಾಟಕದ ಜನತೆಯನ್ನು ಅಭಿನಂದಿಸಿದೆ.

Donate Janashakthi Media

Leave a Reply

Your email address will not be published. Required fields are marked *