ಬೆಳಗಾವಿ: ಕುರಾನ್ ಪುಸ್ತಕ ಕಳ್ಳತನ ಮಾಡಿ ಸುಟ್ಟ ಪ್ರಕರಣ ತಾಲೂಕಿನ ಸಂತಿಬಸ್ತವಾಡ ಗ್ರಾಮದಲ್ಲಿ ನಡೆದಿದ್ದೂ, ಅದಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದ ಮೇರೆಗೆ ಬೆಳಗಾವಿ ಗ್ರಾಮೀಣ ಠಾಣೆ ಇನ್ಸ್ಪೆಕ್ಟರ್ ಮಂಜುನಾಥ ಹಿರೇಮಠ ರನ್ನು ಅಮಾನತು ಮಾಡಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಆದೇಶ ಹೊರಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತರು, ಪುಸ್ತಕ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ ಮಂಜುನಾಥ ಹಿರೇಮಠ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಫ್ಯಾಸಿಸಂ ವಿರುದ್ಧ ವಿಜಯದ 80ನೇ ವಾರ್ಷಿಕೋತ್ಸವ – ಕೆಲವು ಪ್ರಶ್ನೆಗಳು : ಭಾಗ 1
ಇವರ ಲೋಪ ಮೇಲ್ನೋಟಕ್ಕೆ ಕಂಡು ಬಂದಿದೆ. ಬಂತಿ ಬಸ್ತವಾಡ ಗ್ರಾಮದಲ್ಲಿ ಈದ್ದಾ ಗೋಪುರ ಧ್ವಂಸ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ನಿರ್ಲಕ್ಷ್ಯ ವಹಿದ್ದರು ಎಂದರು.
ಮುಸ್ಲಿಂ ಸಮುದಾಯದ ಜನರು ಇಂದು ಚೆನ್ನಮ್ಮ ವೃತ್ತದಲ್ಲಿ ಬೃಹತ್ ಪ್ರತಿಭಟನೆಗೆ ಮುಂದಾಗಿದ್ದು ಇದರ ನಡುವೆ ಅಮಾನತು ಆದೇಶ ಹೊರಬಿದ್ದಿದೆ.
ಪ್ರಕರಣದಾರೋಪಿಗಳು ಇನ್ನೂ ಸಿಗದಿದ್ದರೂ, ಇದೇ ಗ್ರಾಮದಲ್ಲಿ ಈ ಹಿಂದಿನ ಮಸೀದಿ ಗೋಪುರ ಧ್ವಂಸಗೊಳಿಸಿದ್ದರೆನ್ನಲಾದ ಪ್ರಕರಣದಲ್ಲಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ನೋಡಿ: ಬಿಡದಿ : ಮೂಕ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ Janashakthi Media