ಸುರತ್ಕಲ್ : ಸ್ಥಳೀಯ ಶಾಸಕರು, ಮಹಾನಗರ ಪಾಲಿಕೆಯ ಬಿಜೆಪಿ ಆಡಳಿತದ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿತನದಿಂದ ಇಡ್ಯಾ ವಾರ್ಡಿನಲ್ಲಿ ಬಡವರಿಗಾಗಿ ನಿರ್ಮಿಸಲಾಗುತ್ತಿದ್ದ 600 ಮನೆಗಳುಳ್ಳ ವಸತಿ ಯೋಜನೆ ಸ್ಥಗಿತಗೊಂಡಿದೆ ಎಂದು ಆರೋಪಿಸಿ ಸಿಪಿಐಮ್ ಮತ್ತು ಡಿವೈಎಫ್ಐ ವಲಯ ಸಮಿತಿ ನೇತೃತ್ವದಲ್ಲಿ ಜನತಾಕಾಲನಿಯ ಸ್ಥಗಿತಗೊಂಡಿರುವ ವಸತಿ ಸಮುಚ್ಚಯದ ಎದುರು ಇಂದು ಪ್ರತಿಭಟನೆ ನಡೆಯಿತು.
ಇದನ್ನು ಓದಿ :-ಟಿಎಂಸಿ ಮತ್ತು ಬಿಜೆಪಿ ರಾಜಕೀಯ ಲಾಭಕ್ಕಾಗಿ ಹಿಂಸಾಚಾರವನ್ನು ನಡೆಸುತ್ತಿವೆ – ಮುಹಮ್ಮದ್ ಸಲೀಂ ಆರೋಪ
ಪ್ರತಿಭಟನೆ ಉದ್ದೇಶಿಸಿ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ಮಾತನಾಡುತ್ತಾ ಮಂಗಳೂರು ನಗರ ಪಾಲಿಕೆಯೊಳಗೆ ಸುಮಾರು ಹದಿನೈದು ಸಾವಿರಕ್ಕೂ ಹೆಚ್ಚು ಮನೆ, ನಿವೇಶನ ರಹಿತ ಬಡವರಿದ್ದಾರೆ. ನಗರ ಪಾಲಿಕೆ ಬಡವರಿಗೆ ನಿವೇಶನ ವಿತರಿಸಲು ಪಾಲಿಕೆಯಲ್ಲಿ ಯಾವುದೇ ಯೋಜನೆಯಿಲ್ಲ. ಇರುವಂಥ ಒಂದು ಜಿ+4 ವಸತಿ ಸಮುಚ್ಚಯ ಜನಪ್ರತಿನಿದಿಗಳ ಇಚ್ಛಾಶಕ್ತಿಯ ಕೊರತೆಯಿಂದಾಗಿ ಯೋಜನೆ ನೆನೆಗುದಿಗೆ ಬಿದ್ದಿದೆ. ಶ್ರೀಮಂತ ಬಿಲ್ಡರುಗಳ ವಸತಿ ಸಂಕೀರ್ಣದ ಭೂಮಿ ಪೂಜೆಗೆ ಹೋಗುವ ಶಾಸಕರುಗಳು ಕಳೆದ 25ವರ್ಷಗಳಿಂದ ಬಡವರಿಗೆ ವಸತಿ ಸೌಕರ್ಯಗಳು ದೊರಕಿಸಿಕೊಡಲು ವಿಫಲರಾಗಿದ್ದಾರೆ ಎಂದು ಟೀಕಿಸಿದರು. ಬಡವರಿಗೆ ಕೂಡಲೇ ಮನೆ ವಿತರಿಸದಿದ್ದರೆ ವಸತಿ ಸಮುಚ್ಚಯದಲ್ಲೇ ಅಕ್ರಮ ಸಕ್ರಮ
ಮಾಜಿ ಪಾಲಿಕೆ ಸದಸ್ಯ ದಯಾನಂದ ಶೆಟ್ಟಿ ಮಾತನಾಡಿ ಜನರಿಗೆ ವಸತಿ ನೀಡುವುದು ಭಿಕ್ಷೆಯಲ್ಲ ಸಂವಿಧಾನಬದ್ದ ಹಕ್ಕಾಗಿದೆ. ನಗರಪಾಲಿಕೆ ವ್ಯಾಪ್ತಿಯೊಳಗಿನ ನಿವೇಶನ ರಹಿತರ ಸಮಸ್ಯೆ ಗಂಭೀರವಾಗಿದೆ ಶಾಸಕರ ನೇತೃತ್ವದ ಆಶ್ರಯ ಸಮಿತಿ ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ. ಎಂದು ಆರೋಪಿಸಿದರು.
ಇದನ್ನು ಓದಿ :-ಎಸ್ಎಸ್ಎಲ್ಸಿ ಉತ್ತರ ಪತ್ರಿಕೆ ವಿಚಿತ್ರ ಬೇಡಿಕೆ ಇಟ್ಟ ವಿದ್ಯಾರ್ಥಿಗಳು
ಸಿಪಿಎಂ ದಕ್ಷಿಣ ಕಾರ್ಯದರ್ಶಿ ಯೋಗೀಶ್ ಜಪ್ಪಿನಮೊಗರು ಮಾತನಾಡುತ್ತಾ ನಗರಪಾಲಿಕೆ ವ್ಯಾಪ್ತಿಯ ಎಲ್ಲಾ ನಿವೇಶನ ರಹಿತರನ್ನು ಸಂಘಟಿಸಿ ಪಾಲಿಕೆಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.
ಸಿಪಿಐಮ್ e ಮುಖಂಡರಾದ ಶ್ರೀನಾಥ್ ಕುಲಾಲ್, ಐ ಮೊಹಮ್ಮದ್,ಸಲೀಮ್ ಶಾಡೋ, ಡಿವೈಎಫ್ಐ ಮುಖಂಡರಾದ ಬಿಕೆ ಮಕ್ಸೂದ್, ನವಾಜ್ ಕುಲಾಯಿ, ಇಲ್ಯಾಸ್ ಕೃಷ್ಣಾಪುರ, ಇಮ್ತಿಯಾಜ್ ಕುಳಾಯಿ, ಹನೀಫ್ ಕುಳಾಯಿ,ಸಾದಿಕ್ ಕಿಲ್ಪಾಡಿ,ಆಟೋ ರಿಕ್ಷಾ ಚಾಲಕರ ಸಂಘದ ಮುಖಂಡರಾದ ಲಕ್ಷ್ಮೀಶ್ ಅಂಚನ್, ಬಷೀರ್ ಕಾನ, ನಿವೇಶನ ರಹಿತರ ಹೋರಾಟ ಸಮಿತಿಯ ಮುಖಂಡರಾದ ಬಾಲಾಕೃಷ್ಣ ಕುಳಾಯಿ,ಭವ್ಯ ಪಂಜಿಮೊಗರು, ಜೈನಾಬು, ದಿಲ್ ದಾರ್, ಹಸೀನಾ, ನೌಸೀನ, ಮರಿಯಮ್ಮ, ಮುಂತಾದವರು ಉಪಸ್ಥಿತರಿದ್ದರು