ಬೆಂಗಳೂರು: ಕೋವಿಡ್ 19 ಹಗರಣದ ಸಂಬಂಧ, ರಾಜ್ಯ ಸರ್ಕಾರವು ಆಗಸ್ಟ್ 31 ರವರೆಗೆ ಕುನ್ಹಾ ಆಯೋಗದ ಅವಧಿ ವಿಸ್ತರಿಸಿ ಆದೇಶ ಹೊರಡಿಸಿದೆ. ಕೋವಿಡ್ 19 ಪ್ರಕರಣದ ತನಿಖೆಗಾಗಿ ಈ ಹಿಂದೆ ರಾಜ್ಯ ಸರ್ಕಾರ ನಿವೃತ್ತ ನ್ಯಾ.ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚನೆ ಮಾಡಿತ್ತು. ಹಗರಣ
ಆಯೋಗದ ಅವಧಿ ಮಾರ್ಚ್ 21 2025 ರಂದು ಕೊನೆಗೊಂಡಿತ್ತು, ನಂತರ ವಿಚಾರಣಾ ಆಯೋಗದ ಅವಧಿಯನ್ನು ಏಪ್ರಿಲ್ 1 ರಿಂದ ಜೂನ್ 20 ರವರೆಗೆ ವಿಸ್ತರಿಸಿತ್ತು. ಇದೀಗ ಮತ್ತೆ ಕುನ್ಹಾ ಆಯೋಗದ ಅವಧಿ ಆಗಸ್ಟ್ 31 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ವಜಾ
ಆಯೋಗವನ್ನು ಆಗಸ್ಟ್ 25, 2023 ರಂದು ರಚಿಸಲಾಗಿತ್ತು. ಪ್ರಕರಣ ಸಂಬಂಧ 3 ತಿಂಗಳಲ್ಲಿ ವರದಿ ಸಲ್ಲಿಸಬೇಕಿತ್ತು. ಆದರೆ, ಮೊದಲ ಮಧ್ಯಂತರ ವರದಿಯನ್ನು ಆಗಸ್ಟ್ 31, 2024 ರಂದು ಸಲ್ಲಿಸಿತು.
ಬಳಿಕ ಆಯೋಗದ ಅವಧಿಯನ್ನು ಮಾರ್ಚ್ 31, 2025 ರವರೆಗೆ ವಿಸ್ತರಿಸಲಾಯಿತು. ನಂತರ ಮತ್ತೆ ಮೂರು ತಿಂಗಳಿಗೆ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು.
ಇದನ್ನೂ ನೋಡಿ: ಫ್ಯಾಸಿಸಂ ವಿರುದ್ಧ ವಿಜಯದ 80ನೇ ವಾರ್ಷಿಕೋತ್ಸವ | ಜನತಾ ಪ್ರತಿರೋಧ ಗೆರಿಲ್ಲಾ ಸೈನ್ಯಗಳ ಪಾತ್ರ – ಭಾಗ 3