ಕಲಬುರ್ಗಿಯಲ್ಲಿ ‘ದರ್ಗಾವನ್ನು’ ಧ್ವಂಸಗೊಳಿಸಿದ ಕಿಡಿಗೇಡಿಗಳು : ಪರಿಸ್ಥಿತಿ ಉದ್ವಿಗ್ನ

ಲಬುರ್ಗಿ : ದರ್ಗಾವನ್ನು ಧ್ವಂಸಗೊಳಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಎಂಬ ಗ್ರಾಮದಲ್ಲಿ ನಡೆದಿದೆ. 

ಕಲಬುರ್ಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕರದಾಳ ಗ್ರಾಮಕ್ಕೆ ಹೋಗುವ ಮಾರ್ಗ ಮಧ್ಯದಲ್ಲಿ ಇರುವಂತಹ ಹಜರತ್ ಸೈಯದ್ ಪೀರ್ ದರ್ಗಾದಲ್ಲಿನ ಸಮಾಧಿ ಕಿತ್ತು ಹಾಕಿದ ಕಿಡಿಗೇಡಿಗಳು ಮಜಾರ್, ಸುತ್ತಲೂ ಕಟ್ಟಿದ ತಡೆಗೋಡೆಯ ಕಲ್ಲುಗಳನ್ನು ನೆಲಕ್ಕುರುಳಿಸಿದ್ದಾರೆ.

ಇದನ್ನು ಓದಿ : ಜೀವಂತ ಜಿಲಟಿನ್ ಕಡ್ಡಿ ಸ್ಫೋಟ; ಬೆರಳುಗಳು ತುಂಡು

ದರ್ಗಾ ಧ್ವಂಸ ಮಾಡಿರುವ ಸುದ್ದಿ ತಿಳಿಯುತ್ತಿದ್ದಂತೆ ಪಿಎಸ್‌ಐ ಶ್ರೀಶೈಲ್ ಅಂಬಾಟಿ, ಚಂದ್ರಾಮಪ್ಪ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ದರ್ಗಾದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಸೈಯದ್ ಅಲಿ ಅವರಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ.ಪ್ರಕರಣದ ಮಾಹಿತಿ ತಿಳಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ರಸ್ತೆ ಬದಿಯಲ್ಲಿದ್ದ ಹಜರತ್ ಸೈಯದ್ ಪೀರ್ ದರ್ಗಾ ಕಟ್ಟಡಕ್ಕೆ ಹಾನಿ ಮಾಡಿದ ಕಿಡಿಗೇಡಿಗಳು ದರ್ಗಾ ಮುಂಭಾಗದಲ್ಲಿನ ಹೊಲದಲ್ಲಿ ಇದ್ದ ಮತ್ತೊಂದು ಸಣ್ಣದಾದ ಸಮಾಧಿ ಕಿತ್ತು ಹಾಕಿ ದುಷ್ಕೃತ್ಯ ಎಸಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಈ ವೇಳೆ ದರ್ಗಾದ ಉಸ್ತುವಾರಿ ವಹಿಸಿರುವ ಸೈಯದ್ ಅಲಿ ಅವರು ಕಿಡಿಗೇಡಿಗಳ ಪತ್ತೆಗೆ ಮನವಿ ಮಾಡಿದರು. ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಇದನ್ನು ನೋಡಿ : ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿJanashakthi Media

Donate Janashakthi Media

Leave a Reply

Your email address will not be published. Required fields are marked *