ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ  ಮೋಸ; ಬಿಜೆಪಿ ಮುಖಂಡನ ಬಂಧನ

ಶಿವಮೊಗ್ಗ: ಬಿಜೆಪಿ ಮುಖಂಡನೊಬ್ಬ ಮದುವೆಯಾಗುವುದಾಗಿ ನಂಬಿಸಿ ವಿಚ್ಛೇದಿತ ಮಹಿಳೆಗೆ  ಮೋಸ ಮಾಡಿದ ಪ್ರಕರಣ ಶಿವಮೊಗ್ಗದಲ್ಲಿ ನಡೆದಿದೆ.

ಶಿವಮೊಗ್ಗ ಜಿಲ್ಲಾ ಬಿಜೆಪಿ ಮುಖಂಡ ಶರತ್ ಕಲ್ಯಾಣಿ ಯನ್ನು ಪೋಲೀಸರು ಬಂಧಿಸಿದ್ದಾರೆ. ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದೂ ಅಲ್ಲದೇ 4 ಲಕ್ಷ ರೂಪಾಯಿ ಹಣ ಪಡೆದು ವಾಪಾಸ್ ಕೊಡದೇ ವಂಚಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇದನ್ನು ಓದಿ : ವಯನಾಡ್ ‘ಅಲರ್ಟ್’ಗಳ ಬಗ್ಗೆ ದಿಕ್ಕುತಪ್ಪಿಸುವ ಹೇಳಿಕೆ -ಕೇಂದ್ರ ಗೃಹಮಂತ್ರಿಗಳ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ

ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣಾದ ಪ್ರಮುಖನಾಗಿರುವ ಶರತ್ ಕಲ್ಯಾಣಿ ವಿರುದ್ಧ ಜುಲೈ 26ರಂದೇ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗುತ್ತಿದ್ದಂತೆ ಶರತ್ ನಾಪತ್ತೆಯಾಗಿದ್ದ. ಇದೀಗ ಪೊಲೀಸರು ವಿಜಯಪುರ ಬಳಿ ಶರತ್ ಕಲ್ಯಾಣಿಯನ್ನು ಬಂಧಿಸಿದ್ದಾರೆ.

ಶರತ್ ಕಲ್ಯಾಣಿ ಅದಾಗಲೇ ಒಂದು ವಿವಾಹಯಾಗಿದ್ದರೂ ತಾನು ಅವಿವಾಹಿತ ಎಂದು ಹೇಳಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 43 ವರ್ಷದ ವಿಚ್ಛೇದಿತ ಮಹಿಳೆಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ. ಆಕೆಯನ್ನು ದೈಹಿಕವಾಗಿ ಬಳಸಿಕೊಂಡಿದ್ದು ಅಲ್ಲದೇ, ನಾಲ್ಕು ಲಕ್ಷ ಹಣವನ್ನೂ ದೋಚಿ ವಂಚಿಸಿದ್ದ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ದೂರು ದಾಖಲಿಸಿದ್ದರು.

ಇದನ್ನು ನೋಡಿ : ವಚನ ದರ್ಶನ ಪುಸ್ತಕದಲ್ಲಿ ಬಸವತತ್ವಕ್ಕೆ ಅಪಚಾರ – ಪ್ರತಿಭಟನೆJanashakthi Media

Donate Janashakthi Media

Leave a Reply

Your email address will not be published. Required fields are marked *