ಚಿತ್ರದುರ್ಗ: ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು. ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ಸ್, ಗುತ್ತಿಗೆ ಲೆಕ್ಕಿಗರು, ಕ್ಲೀನರ್ ಪೌರಕಾರ್ಮಿಕರು, ಸೂಪರ್ ವೈಸರ್ಸ್, ಕಂಪ್ಯೂಟರ್ ಆಪರೇಟರ್ಗಳು, ಜ್ಯೂನಿಯರ್ ಪ್ರೋಗ್ರಾಸ್ ಸಿಬ್ಬಂದಿಗಳನ್ನು ಖಾಯಂ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಪೌರಕಾರ್ಮಿಕರ ಸಂಘದ ವತಿಯಿಂದ ನೌಕರರು ಮೇ 26 ಸೋಮವಾರದಂದು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿರುವ ಎಲ್ಲಾ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರ ಸಾಕಷ್ಟು ಸಂಕಷ್ಟಗಳನ್ನು ಅನುಭವಿಸುತ್ತಿದ್ದಾರೆ. ಆದರೂ ಕೂಡ ಸರ್ಕಾರ ನಮ್ಮಗಳತ್ತ ಗಮನಹರಿಸದೆ ನಿರ್ಲಕ್ಷ್ಯ ತೋರುತ್ತಿದೆ.ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಘೋಷಿಸಬೇಕು ಹಾಗೂ ಕೆ.ಜಿ.ಐ.ಡಿ., ಜಿ.ಪಿ.ಎಫ್., ಜ್ಯೋತಿ ಸಂಜೀವಿನಿ, ಸೇರಿದಂತೆ ಸರ್ಕಾರಿ ನೌಕರರಿಗೆ ಸಿಗುವ ಸೌಲಭ್ಯವನ್ನು ಪೌರ ನೌಕರರಿಗೂ ಜಾರಿ ಮಾಡಬೇಕು.
ಸುಮಾರು 25-30 ವರ್ಷಗಳಿಂದ ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಿಬ್ಬಂದಿಗಳು, ಲೋಡರ್ಸ್, ಗುತ್ತಿಗೆ ಲೆಕ್ಕಿಗರು, ಕ್ಲೀನರ್ ಪೌರಕಾರ್ಮಿಕರು, ಸೂಪರ್ ವೈಸರ್ಸ್, ಕಂಪ್ಯೂಟರ್ ಆಪರೇಟರ್ಗಳು, ಜ್ಯೂನಿಯರ್ ಪ್ರೋಗ್ರಾಸ್ ಸಿಬ್ಬಂದಿಗಳನ್ನು ಖಾಯಂ ಮಾಡಬೇಕು.
ಇದನ್ನೂ ಓದಿ: ಸಂವಿಧಾನದಿಂದಾಚೆಗಿನ ಸಮಾಜದತ್ತ ನೋಡಬೇಕಿದೆ
2022-23ನೇ ಸಾಲಿನಲ್ಲಿ ಪೌರಕಾರ್ಮಿಕರ ವಿಶೇಷ ನೇಮಕಾತಿಯಡಿ ಪೌರಕಾರ್ಮಿಕರು ನೇಮಕಾತಿ ಹೊಂದಿದ್ದು, ನೌಕರರಿಗೆ ಸರ್ಕಾರವು ನಗರ ಸ್ಥಳೀಯ ಸಂಸ್ಥೆಯ ಸ್ಥಳೀಯ ನಿಧಿಯಿಂದ ವೇತನ ಪಡೆಯಲು ಆದೇಶಿಸಲಾಗಿದ್ದನ್ನು ರದ್ದುಪಡಿಸಿ, ಎಸ್.ಎಫ್.ಸಿ ಅನುದಾನದಡಿ ವೇತನವನ್ನು ನೀಡಬೇಕು ಎಂದು ಒತ್ತಾಯಿಸಿ ಪೌರಕಾರ್ಮಿಕರು ತೋಳಿಗೆ ಕಪ್ಪು ಬಟ್ಟೆ ಧರಿಸಿ ಪ್ರತಿಭಟನೆ ನಡೆಸಿದರು.
ಚಿತ್ರದುರ್ಗ ನಗರಸಭೆಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೂ ಪ್ರತಿಭಟನೆಯನ್ನು ನಡೆಸಿದ ಪೌರ ಕಾರ್ಮಿಕರು ದಾರಿಯುದ್ದಕ್ಕೂ ಬೇಡಿಕೆ ಈಡೇರಿಕೆಗಾಗಿ ಘೋಷಣೆಗಳನ್ನು ಕೂಗಲಾಯಿತು.
ತಮ್ಮ ಬೇಡಿಕೆ ಈಡೇರಿಕೆಗಾಗಿ ಕಳೆದ ಒಂದು ತಿಂಗಳಿಂದ ಕಚೇರಿಯಲ್ಲಿ ಕಪ್ಪು ಪಟ್ಟಿಯನ್ನು ಧರಿಸಿ ಕೆಲಸವನ್ನು ಮಾಡುವುದರ ಮೂಲಕ ಸರ್ಕಾರವನ್ನು ಒತ್ತಾಯಿಸಿದ್ದರು. ಇದಾದ ನಂತರ ಜಿಲ್ಲಾ ರಕ್ಷಣಾಧಿಕಾರಿಗಳು, ನಗರಸಭೆಯ ಅಧ್ಯಕ್ಷರು, ಪೌರಾಯುಕ್ತರಿಗೆ ಮನವಿ ಸಲ್ಲಿಸಿ ನಮ್ಮ ಬೇಡಿಕೆ ಈಡೇರಿಕೆಗೆ ಒತ್ತಾಯಿಸಲಾಯಿತು.
ಪ್ರತಿಭಟನೆಯಲ್ಲಿ ಪೌರಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ಡಿ.ದುರುಗೇಶ, ಸಿ.ರೇಣುಕಾ, ರಾಜಣ್ಣ, ಎಸ್.ಪಿ.ಲವ ಸೇರಿದಂತೆ ಸುಮಾರು 300 ಕ್ಕೂ ಹೆಚ್ಚು ಪೌರಕಾರ್ಮಿಕರು ಭಾಗವಹಿಸಿದ್ದರು.
ಇದನ್ನೂ ನೋಡಿ: ಗಾಂಧೀ ಸೆಂಟರ್ ಅಫ್ ಸೈನ್ಸ್ಗೆ ಆಹ್ವಾನ ನೀಡಿದ್ದೇ ಡಾ. ಎಸ್. ಬಾಲಚಂದ್ರನ್ – ಪಾಲಹಳ್ಳಿ ವಿಶ್ವನಾಥ್