ಅಮಿತ್ ಶಾ ವಿರುದ್ಧದ ಮಾನನಷ್ಟ ಪ್ರಕರಣ | ರಾಹುಲ್ ಗಾಂಧಿ ಅರ್ಜಿ ತಿರಸ್ಕರಿಸಿದ ಜಾರ್ಖಂಡ್ ಹೈಕೋರ್ಟ್

ರಾಂಚಿ: ಹಿಂದಿನ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಕೊಲೆ ಆರೋಪಿ ಎಂದು ಕರೆದಿದ್ದಕ್ಕಾಗಿ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ವಿಚಾರಣಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ರದ್ದುಗೊಳಿಸುವಂತೆ ಕೋರಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದ್ದು, ಅವರ ವಿರುದ್ಧ ಸಂಸದ-ಶಾಸಕ ನ್ಯಾಯಾಲಯದಲ್ಲಿ ವಿಚಾರಣೆಗೆ ಕೋರ್ಟ್ ಅನುಮತಿ ನೀಡಿದೆ.

ಇದರೊಂದಿಗೆ ಇದೀಗ ರಾಹುಲ್ ಗಾಂಧಿ ವಿರುದ್ಧ ಸಂಸದ-ಶಾಸಕ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಪ್ರಕರಣದಲ್ಲಿ ಫೆಬ್ರವರಿ 16 ರಂದು ರಾಹುಲ್ ಗಾಂಧಿ ಅವರ ಲಿಖಿತ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಪ್ರಸ್ತುತಪಡಿಸಲಾಗಿತ್ತು. ಇದರ ನಂತರ ನ್ಯಾಯಮೂರ್ತಿ ಅಂಬುಜನಾಥ್ ಅವರ ನ್ಯಾಯಾಲಯವು ತೀರ್ಪನ್ನು ಕಾಯ್ದಿರಿಸಿತ್ತು.

ಇದನ್ನೂ ಓದಿ:ಕಲಬುರಗಿ | ಮೋಸದಿಂದ ರಷ್ಯಾ ಗಡಿಯಲ್ಲಿ ಸಿಲುಕಿರುವ ಮಗ ಮತ್ತು ಅವರ ಸ್ನೇಹಿತರನ್ನು ಕರೆತರುವಂತೆ ಡಿಸಿ, ಸಚಿವರಿಗೆ ಪತ್ರ ಬರೆದ ತಂದೆ

2018ರ ಮಾರ್ಚ್ 18ರಂದು ಎಐಸಿಸಿ ಸರ್ವಸದಸ್ಯರ ಅಧಿವೇಶನದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, “ಹತ್ಯೆಯ ಆರೋಪ ಹೊತ್ತಿರುವ ವ್ಯಕ್ತಿಯನ್ನು ಅವರು ಬಿಜೆಪಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ” ಎಂದು ಹೇಳಿದ್ದರು.

ರಾಂಚಿಯ ಸಂಸದ-ಶಾಸಕ ನ್ಯಾಯಾಲಯವು ಈ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ನೀಡಿತ್ತು, ಜೊತೆಗೆ ನ್ಯಾಯಾಲಯದಲ್ಲಿ ಭೌತಿಕವಾಗಿ ಹಾಜರಾಗುವಂತೆ ಸೂಚಿಸಿತ್ತು. ಇದರ ವಿರುದ್ಧ ಅವರು ಪರಿಹಾರಕ್ಕಾಗಿ ಜಾರ್ಖಂಡ್ ಹೈಕೋರ್ಟ್‌ಗೆ ತೆರಳಿದ್ದರು. ಆದರೆ, ಶುಕ್ರವಾರ ಹೈಕೋರ್ಟ್ ಅವರ ಅರ್ಜಿಯನ್ನು ತಿರಸ್ಕರಿಸಿ ಅವರ ವಿರುದ್ಧ ವಿಚಾರಣೆಗೆ ಆದೇಶಿಸಿದೆ.

2018 ರ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ರಾಹುಲ್ ಅವರು ಅಮಿತ್ ಶಾ ವಿರುದ್ಧ ಟೀಕೆಗಳನ್ನು ಮಾಡಿದ್ದರು. ಜಾರ್ಖಂಡ್ ಹೈಕೋರ್ಟ್ ರಾಂಚಿಯಲ್ಲಿ ಅಂದಿನ ನ್ಯಾಯಾಂಗ ಆಯುಕ್ತರು ಅಂಗೀಕರಿಸಿದ ನಿರ್ಧಾರವನ್ನು ಎತ್ತಿಹಿಡಿದಿದೆ, ಇದು ಐಪಿಸಿಯ ಸೆಕ್ಷನ್ 500 ರ ಅಡಿಯಲ್ಲಿ ರಾಹುಲ್ ಗಾಂಧಿ ವಿರುದ್ಧದ ಪ್ರಕರಣವು ನಿಜವೆಂದು ಪ್ರಾಥಮಿಕವಾಗಿ ಕಂಡುಹಿಡಿದಿದೆ. “ಭಾಷಣದ ಪ್ರಾಥಮಿಕ ವಿಚಾರ ಬಿಜೆಪಿಯ ಉಲ್ಲೇಖವನ್ನು ಹೇರಳವಾಗಿ ಮಾಡಲಾಗಿದೆ ಎಂದು ಸೂಚಿಸುತ್ತದೆ. ಈ ಉಲ್ಲೇಖಗಳು ಮಾನನಷ್ಟವಾಗಿದೆಯೇ ಅಥವಾ ಇಲ್ಲವೇ ಎಂಬುದನ್ನು ನೋಡಬೇಕು” ಎಂದು ನ್ಯಾಯಾಲಯ ಹೇಳಿದೆ.

2018 ರ ಹೇಳಿಕೆ

ರಾಹುಲ್ ಗಾಂಧಿ ಅವರು ಮಾರ್ಚ್ 18, 2018 ರಂದು ಎಐಸಿಸಿ ಸರ್ವಸದಸ್ಯರ ಅಧಿವೇಶನದಲ್ಲಿ ತಮ್ಮ ಹೇಳಿಕೆಯಲ್ಲಿ ‘ಈ ದೇಶದ ಜನರು ಸುಳ್ಳು ಹೇಳುವ ಬಿಜೆಪಿ ನಾಯಕತ್ವವನ್ನು ಒಪ್ಪಿಕೊಳ್ಳುತ್ತಾರೆ’ ಮತ್ತು ‘ಕೊಲೆ ಆರೋಪಿಯನ್ನು ಬಿಜೆಪಿಯ ಅಧ್ಯಕ್ಷರನ್ನಾಗಿ ಸ್ವೀಕರಿಸುತ್ತಾರೆ ಆದರೆ ಕಾಂಗ್ರೆಸ್‌ನಲ್ಲಿ ಅದೇ ರೀತಿಯ ಜನರನ್ನು ಎಂದಿಗೂ ಒಪ್ಪಿಕೊಳ್ಳುವುದಿಲ್ಲ’ ಎಂದು ಹೇಳಿದ್ದರು.

ವಿಡಿಯೊ ನೋಡಿ: ಮೈಸೂರು | ತೆರಿಗೆ ಪಾಲಿನಲ್ಲಿ ಕೇಂದ್ರದಿಂದ ಅನ್ಯಾಯ : ಕರ್ನಾಟಕ ಜನರಂಗದಿಂದ ಅಹೋರಾತ್ರಿ ಧರಣಿ Janashakthi Media

Donate Janashakthi Media

Leave a Reply

Your email address will not be published. Required fields are marked *