ದೆಹಲಿಯಿಂದ ಬಂದವರು ಸಿಎಂ ಮಾಡ್ತೀವಿ 2500 ಕೋಟಿ ಕೊಡಿ ಅಂದ್ರು: ಬಸನಗೌಡ ಪಾಟೀಲ್‌ ಯತ್ನಾಳ್‌  

ಬೆಳಗಾವಿ: ದೆಹಲಿಯಿಂದ ಬಂದ ಕೆಲವರು ಎರಡೂವರೆ ಸಾವಿರ ಕೋಟಿ ನೀಡಿ ಸಿಎಂ ಮಾಡ್ತೀವಿ ಅಂದಿದ್ರು. ರಾಜಕಾರಣದಲ್ಲಿ ಯಾರೂ ಅಲ್ಲಿ ಇಲ್ಲಿ ಹೋಗಿ ಹಾಳಾಗಬೇಡಿ. ನಿಮಗೆ ಟಿಕೆಟ್ ಕೊಡಿಸುತ್ತೇವೆ, ದೆಹಲಿ ಕರೆದುಕೊಂಡು ಹೋಗ್ತೀವಿ. ಸೋನಿಯಾ ಗಾಂಧಿ ಭೇಟಿ ಮಾಡಿಸ್ತೀವಿ, ಜೆ‌.ಪಿ.ನಡ್ಡಾರನ್ನ ಭೇಟಿ ಮಾಡಿಸ್ತೀವಿ ಅಂತಾರೆ ಎಂಬುದನ್ನು ಬಸನಗೌಡ ಪಾಟೀಲ್‌ ಯತ್ನಾಳ್‌ ಬಹಿರಂಗ ಪಡಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದ್ದು, ರಾಜಕಾರಣದಲ್ಲಿ ಯಾರೂ ಅಲ್ಲಿ-ಇಲ್ಲಿ ಹೋಗಿ ಹಾಳಾಗಬೇಡಿ. ನಿಮಗೆ ಟಿಕೆಟ್ ಕೊಡಿಸುತ್ತೇವೆ, ದೆಹಲಿ ಕರೆದುಕೊಂಡು ಹೋಗ್ತೀವಿ. ಸೋನಿಯಾ ಗಾಂಧಿ ಭೇಟಿ ಮಾಡಿಸ್ತೀವಿ, ಜೆ‌.ಪಿ.ನಡ್ಡಾರನ್ನ ಭೇಟಿ ಮಾಡಿಸ್ತೀವಿ ಅಂತಾರೆ. ದೆಹಲಿಯಿಂದ ಒಂದಿಷ್ಟು ಜನ ನನ್ನ ಬಳಿಯೂ ಬಂದಿದ್ದರು. ನಿಮ್ಮನ್ನು ಸಿಎಂ ಮಾಡ್ತೀವಿ 2500 ಕೋಟಿ ಸಜ್ಜ ಮಾಡಿ ಇಡ್ರಿ ಅಂದ್ರು. ನಾ ಅಂದೆ ಮಕ್ಕಳಾ, 2500 ಕೋಟಿ ಅಂದ್ರೆ ಏನ್ ಅಂತಾ ತಿಳಿದಿರಿ ಅಂದೆ. ಆ ಎರಡೂವರೆ ಸಾವಿರ ಕೋಟಿ ಹೆಂಗ್ ಇಡೋದು. ಏನು ಕೋಣೆಯಲ್ಲಿ ಇಡೋದೋ? ಗೋದಾಮಿನಲ್ಲಿ ಇಡೋದೋ? ಹಂಗ ಟಿಕೆಟ್ ಕೊಡ್ತೀನಿ ಅಂತಾ ರಾಜಕಾರಣದಲ್ಲಿ ಎಲ್ಲಾ ಕಡೆ ಮೋಸ ಮಾಡ್ತಾರೆ. ನಾನು ವಾಜಪೇಯಿಯವರ ಕೈಯಲ್ಲಿ ಕೆಲಸ ಮಾಡಿದವನು. ಅಡ್ವಾಣಿ, ರಾಜನಾಥಸಿಂಗ್‌, ಅರುಣ್ ಜೇಟ್ಲಿ ನನ್ನ ಬಸನಗೌಡ ಅಂತಾ ಹೆಸರು ಹೇಳಿ ಕರಿತಿದ್ರು. ಅಂತಾ ವ್ಯಕ್ತಿಗೆ ಹೇಳ್ತಾರೆ ಎರಡೂಸಾವಿರ ಕೋಟಿ ಸಜ್ಜ ಮಾಡಿ ಸಿಎಂ ಮಾಡ್ತೀವಿ ಅಂತಾರೆ. ನಡ್ಡಾರ ಮನೆಗೆ ಕರೆದುಕೊಂಡು ಹೋಗ್ತೀವಿ, ಅಮಿತ್ ಶಾ ಮನೆಗೆ ಕರೆದುಕೊಂಡು ಹೋಗ್ತೀವಿ ಅಂತಾ ಹಿಂಗಿಲ್ಲಾ ನಡಿತದೆ ಎಂದು ಮತ್ತೊಂದು ಬಾಂಬ್ ಸಿಡಿಸಿದ್ದಾರೆ.

ಚುನಾವಣೆ ಸಮೀಸುತ್ತಿದ್ದಂತೆ….

ಚುನಾವಣೆ ಸಮೀಪಿಸುತ್ತಿದ್ದಂತೆ ಎಲ್ಲಾ ಆರಂಭವಾಗುತ್ತದೆ. ಇನ್ನು ಒಂದು ವರ್ಷ ಆದ್ರೆ ಸಾಮೂಹಿಕ ವಿವಾಹ, 151 ಜೋಡಿ ವಿವಾಹ ಮಾಡ್ತೀವಿ ಅಂತಾ ಬರ್ತಾರೆ. ಯಾರು ಏನೇನೋ ಭಾಗ್ಯ ಕೊಡ್ತಾರೆ ತಗೋಳಿ. ವೋಟ್ ಮಾತ್ರ ಚಲೋ ಭಾಗ್ಯ ಇರೋರಿಗೆ ಕೊಡ್ರಿ. ದಿಢೀರ್ ಸಾಮಾಜಿಕ ಕಾರ್ಯಕರ್ತರು ಹುಟ್ಟಿಕೊಳ್ತಾರೆ. ಬೆಂಗಳೂರುನವರೂ ಬರ್ತಾರೆ ನೋಟ್ ಬುಕ್ ವಿತರಣೆ, ಲಗ್ನ ಮಾಡಾಕ ಶುರು ಮಾಡ್ತಾರೆ. ನಾಟಕ ಮಾಡ್ತೀವಿ ಅಂದ್ರೆ ಹದಿನೈದು ಇಪ್ಪತ್ತು ಸಾವಿರ ಕೊಡ್ತಾರೆ. ನಾನು ರೊಕ್ಕ ಬಿಚ್ಚುದಿಲ್ಲ. ಆದರೂ ಮಂದಿ ವೋಟ್ ಹಾಕ್ತಾರ. ನಾನು  ಯಾರಿಗೂ ಕಿರಿಕಿರಿ ಮಾಡಲ್ಲ ಎಂದರು.

ನಿರಾಣಿ ಕ್ಯಾಶ್ ಕ್ಯಾಂಡಿಡೇಟ್…

ನಮ್ಮ ಹೋರಾಟದಿಂದ 3ಜನ ಪಂಚಮಸಾಲಿ ಸಚಿವರಾಗಿದ್ದಾರೆ. ಅದರಲ್ಲಿ ಒಂದ್ ಕ್ಯಾಶ್ ಕ್ಯಾಂಡಿಡೇಟ್ ಐತಿ ಅದನ್ನ ಮಾಡಲೇಬೇಕಾಗಿತ್ತು ಎಂದು ಮುರುಗೇಶ್ ನಿರಾಣಿಗೆ ಪರೋಕ್ಷವಾಗಿ ಕ್ಯಾಶ್ ಕ್ಯಾಂಡಿಡೇಟ್ ಎಂದು ಯತ್ನಾಳ್ ಭಾಷಣದ ವೇಳೆ ಹೇಳಿದ್ದಾರೆ.

ನಾ ರೊಕ್ಕಾ ಕೊಡವನಲ್ಲ ಕಿಸಿಯವನಲ್ಲ. 50 ಕೋಟಿ ನೂರು ಕೋಟಿ ಕೊಡ್ತಾನೆ, ಅವು ಬಾಯಿ ತಕ್ಕೊಂಡು ಕೂತಿರ್ತಾವ. ಹಣ ತಗೊಂಡು ಮಂತ್ರಿ ಮಾಡ್ತಾರೆ. ನಾನು ಎಂಬುವನು ಕರ್ನಾಟಕ ಲೂಟಿ ಮಾಡೋಕೆ ಭಗವಂತನ ಸಾಕ್ಷಿಯಾಗಿ ಅಂತಾರೆ. ರಗಡ್ ಜಿಗದಾಡ್ತಾರೆ ನಂದೇನರ ತಗದು ಮಾಡಬೇಕು ಅಂತೇಳಿ. ಮೊನ್ನೆ ಕೆಪಿಎಸ್‌ಸಿ, ಪಿಎಸ್ಐ ಹಗರಣ ಮೊದಲಿಂದ ನಡಿದಿದೆ ಅಂದಿದ್ದೆ. ಆಗ ಕಾಂಗ್ರೆಸ್ ನವರು ಎಸಿಬಿಗೆ ದೂರು ಕೊಟ್ಟರು. ಯತ್ನಾಳ್ ಗೆ ಎಲ್ಲ ಗೊತ್ತು ಮಾಹಿತಿ ಪಡೆಯಬೇಕು ಅಂತಾ ದೂರು ಕೊಟ್ಟರು. ಸಂಜೆ ಅವರ ಅಧ್ಯಕ್ಷನದ್ದೇ ಊಣ ಹೊರಗೆ ಬಂತು. ಎಲ್ಲೋ ಹೋಗಿ ಸಿಗಸಬೇಕು ಅಂತಾರೆ ಅವರೇ ಕಡೇಕ್ ಆಗ್ತಾರೆ ಎಂದ ಯತ್ನಾಳ್.

Donate Janashakthi Media

Leave a Reply

Your email address will not be published. Required fields are marked *