ಸಿಎಂ ಕುಟುಂಬದ ಸದಸ್ಯರ ಬಗ್ಗೆ ಅವಹೇಳನಕಾರಿ ಪೋಸ್ಟ್ : ಬಿಜೆಪಿ ಕಾರ್ಯಕರ್ತೆ ಬಂಧನ

ಬೆಂಗಳೂರು:ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರ ಕುರಿತು ಸಾಮಾಜಿಕ ಜಾಲತಾಣದಲ್ಲಿ  ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಂಕುತಲಾ. ಎಸ್‌ ಎಂಬುವವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್‌ ಕಾರ್ಯಕರ್ತ ಹನುಮಂತರಾಯ ಎಂಬುವವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್‌ ಠಾಣಾ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ಇದನ್ನೂ ಓದಿ:ಪೊಲೀಸರ ಮೇಲೆ ಹಲ್ಲೆ ಆರೋಪ : ವೈಎಸ್ಆರ್ಟಿಪಿ ಅಧ್ಯಕ್ಷೆ ವೈಎಸ್ ಶರ್ಮಿಳಾ ಬಂಧನ

ಉಡುಪಿ ಕಾಲೇಜು ವಿಡಿಯೋ ಚಿತ್ರೀಕರಣ ಪ್ರಕರಣದ ಕುರಿತು ರಾಜ್ಯ ಕಾಂಗ್ರೆಸ್‌ ಮಾಡಿದ್ದ ಟ್ವೀಟ್‌ ವಿರೋಧಿಸುವ ಭರದಲ್ಲಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರು ಸಿದ್ಧರಾಮಯ್ಯ ಅವರ ಕುಟುಂಬದ ಸದಸ್ಯರನ್ನು ಉಲ್ಲೇಖಿಸಿ ಮರು ಟ್ವೀಟ್‌ ಮಾಡಿದ್ದರು.

ಮುಖ್ಯಮಂತ್ರಿಗಳು ಮತ್ತು ಅವರ ಕುಟುಂಬದ ಸದಸ್ಯರ ಕುರಿತು ಅವಾಚ್ಯ ಶಬ್ದಗಳನ್ನು ಬಳಸಿ ಅವಹೇಳನಕಾರಿ ಪೋಸ್ಟ್‌ ಮಾಡಿದ್ದರು ಎಂದು ಕಾಂಗ್ರೆಸ್‌ ಕಾರ್ಯಕರ್ತ ಹನುಮಂತರಾಯ ಹೈಗ್ರೌಂಡ್ಸ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಶಕುಂತಲಾರನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *