ಮಹಿಳೆಯರ ವಸ್ತ್ರಧಾರಣೆಯ ಬಗ್ಗೆ ಅವಹೇಳನಕಾರಿ ಪೋಸ್ಟ್‌: ವಿಶ್ವೇಶ್ವರ ಭಟ್‌ ಮೇಲೆ ಪ್ರಕರಣ ದಾಖಲು

ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೋಟಮ್ಮ ಮತ್ತು ಮಮತಾ ಬ್ಯಾನರ್ಜಿ ಕುರಿತು ಅವಹೇಳನಕಾರಿ ಫೇಸ್ಬುಕ್‌ ಪೋಸ್ಟ್‌ ಹಾಕಿದ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್‌ ಮೇಲೆ  ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ರಕರ್ತ ವಿಶ್ವೇಶ್ವರ್‌ ಭಟ್‌ ಆಗಸ್ಟ್-20 ರಂದು ತಮ್ಮ ಫೇಸ್ ಬುಕ್‌ ನಲ್ಲಿ ಮಹಿಳೆಯರ ವಸ್ತ್ರಧಾರಣೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿಕೊಂಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿತ್ತು.

ಇದನ್ನೂ ಓದಿ:ಮಹಿಳಾ ನಾಯಕರ ದೇಹದ ಬಗ್ಗೆ ಅವಹೇಳನಕಾರಿ ಹೇಳಿಕೆ;ವಿಶ್ವೇಶ್ವರ್‌ ಭಟ್‌ ವಿರುದ್ಧ ಆಕ್ರೋಶ

ವಿಶ್ವೇಶ್ವರ ಭಟ್‌ ಮೇಲೆ  ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್ ಕಾನೂನು ವಿಭಾಗದ ಉಪಾಧ್ಯಕ್ಷರಾದ ವಕೀಲ ಮಂಜುನಾಥ ನಾಯಕ್ ದೂರು ದಾಖಲಿಸಿದ್ದಾರೆ.

ಪೋಸ್ಟ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಮೋಟಮ್ಮ, ಮಮತಾ ಬ್ಯಾನರ್ಜಿಯವರ ಬಗ್ಗೆ ಅವಹೇಳನಕಾರಿ ಹಾಗೂ ಅಸಹ್ಯಕಾರಿ ಪೋಸ್ಟ್‌ ಮಾಡಿರುವ ಹಿನ್ನೆಲೆಯಲ್ಲಿ‌ ಈ ಕೇಸ್‌ ದಾಖಲಾಗಿದೆ.

Donate Janashakthi Media

Leave a Reply

Your email address will not be published. Required fields are marked *