ಕೋವಿಶೀಲ್ಡ್‌ನಿಂದ ಯಾವುದೇ ಅಡ್ಟಪರಿಣಾಮ‌ ಉಂಟಾಗುತ್ತಿದೆ ಎಂಬ ಭಯಬೇಡ ವೆಂದ ದಿನೇಶ್ ಗುಂಡೂರಾವ್

ಧಾರವಾಡ: ಕೋವಿಶೀಲ್ಡ್ ಲಸಿಕೆ ಪಡೆದವರಿಗೆ ಯಾವುದೇ ಅಡ್ಡಪರಿಣಾಮ ಉಂಟಾಗುತ್ತಿದೆ ಎಂಬ ಭಯ ಬೇಡ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದ್ದಾರೆ. ಕೋವಿಶೀಲ್ಡ್‌

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದವರಲ್ಲಿ ಬೆರಳೆಣಿಕೆಯಷ್ಟು ಜನರಿಗೆ ಮಾತ್ರ ಗಂಭೀರ ಆರೋಗ್ಯ ಸಮಸ್ಯೆಗಳು ಕಂಡುಬಂದಿರುವ ಬಗ್ಗೆ ಆರೋಗ್ಯ ಇಲಾಖೆಯಿಂದ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಿದರು.

ಇದನ್ನು ಓದಿ : ಮೋದಿ ವಿರುದ್ಧ ಸ್ಪರ್ಧಿಸಿರುವ ಹಾಸ್ಯನಟ ಶ್ಯಾಮ್ ರಂಗೀಲಾ; ಕನ್ನಡದ ನಟ ಕಿಶೋರ್ ಬೆಂಬಲ

ನಾಲೈದು ಜನರಿಗೆ ವ್ಯಾಕ್ಸಿನ್ ಪಡೆದ ಬಳಿಕ ಗಂಭೀರ ಆರೋಗ್ಯ ಸಮಸ್ಯೆ ಎದುರಿಸಿರುವ ಬಗ್ಗೆ ಮಾಹಿತಿ ಇದೆ. ಆದರೆ ಇದು ಲಸಿಕೆಯಿಂದಲೇ ಆಗಿದೆಯಾ ಅಥವಾ ಬೇರೆ ಆರೋಗ್ಯದ ಸಮಸ್ಯೆಗಳು ಕೂಡ ಕಾರಣವೇ ಎಂಬುದನ್ನು ನೋಡಬೇಕು ಎಂದರು. ಕೋವಿಶೀಲ್ಡ್‌

ವದಂತಿಗಳಿಗೆ ಜನರು ಕಿವಿಗೊಡಬಾರದು. ಯಾರಿಗೆ ದೇಹದಲ್ಲಿ ಸಮಸ್ಯೆಗಳು ಕಂಡುಬಂದು, ಅನುಮಾನಗಳಿದ್ದರೆ ಅವರು ಆಸ್ಪತ್ರೆಗಳಿಗೆ ಭೇಟಿ ನೀಡಿ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಯಾವ ನಿರ್ದೇಶನ ನೀಡಲಿದೆ ಎಂಬುದನ್ನು ಕಾದು ನೋಡೋಣ ಎಂದು ಹೇಳಿದರು.

ಇದನ್ನು ನೋಡಿ : ಪೆನ್‌ಡ್ರೈವ್‌ ಪ್ರಕರಣ : ಬಿಜೆಪಿ ಮೌನಕ್ಕೆ ಕಾರಣವೇನು?ಸಂಧ್ಯಾ ಸೊರಬ ವಿಶ್ಲೇಷಣೆಯಲ್ಲಿ

Donate Janashakthi Media

Leave a Reply

Your email address will not be published. Required fields are marked *