ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ನಿವಾಸಕ್ಕೆ : ಡಿ.ಕೆ.ಶಿವಕುಮಾರ್‌ ಭೇಟಿ

ಬೆಂಗಳೂರು: ಆಪರೇಷನ್ ಹಸ್ತದ ಕೂಗು ರಾಜಕೀಯ ವಲಯದಲ್ಲಿ ಜೋರಾಗಿ ಕೇಳಿಬರುತ್ತಿದೆ. ಚಿತ್ರದುರ್ಗದ ಹಿರಿಯ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮನೆಗೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ.

ಇದನ್ನೂ ಓದಿ:ರಾಮನ ಪಾರ್ಟಿಯಲ್ಲಿ ರಾಮಾಯಣ ನಡೆಯುತ್ತಿದೆ – ಡಿ.ಕೆ ಶಿವಕುಮಾರ್

ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಪೂರ್ಣಿಮಾ ಶ್ರೀನಿವಾಸ್ ಅವರ ಕೆಆರ್ ಪುರಂ ನಿವಾಸಕ್ಕೆ ಡಿಕೆಶಿ ಭೇಟಿ ನೀಡಿ ಪೂಜೆ ಸಲ್ಲಿಸಿದವರು. ಈ ವಿಚಾರ ಭಾರೀ ಚರ್ಚೆಯಾದ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್, ನಮ್ಮದು ಆಪರೇಷನ್ ಅಲ್ಲ, ಕೋ ಅಪರೇಷನ್. ಕೃಷ್ಣ ಜನ್ಮಾಷ್ಟಮಿಗೆ ಕರೆದಿದ್ದರು ಬಂದಿದ್ದೇನೆ. ಆಶೀರ್ವಾದ ಪಡೆದಿದ್ದೇನೆ, ಊಟ ಮಾಡಿದ್ದೇನೆ ಎಂದು ಹೇಳಿದರು.

ಪೂರ್ಣಿಮಾ ಶ್ರೀನಿವಾಸ್ ಅವರು ಮಾತನಾಡಿ, ಇವತ್ತು ಡಿ.ಕೆ ಶಿವಕುಮಾರ್ ಅವರು ಹಬ್ಬದ ಕಾರಣಕ್ಕೆ ಮನೆಗೆ ಬಂದು ಊಟ ಮಾಡಿ ಹೋದರು. ಕಾಂಗ್ರೆಸ್ಸಿನಿಂದ ನನಗೆ ಆಹ್ವಾನವಿದೆ. ಆದರೆ ನಾನು ಬಿಜೆಪಿಯಲ್ಲಿ ಇದ್ದೇನೆ. ಬಿಜೆಪಿ ಬಿಡುವ ಯೋಚನೆ ಮಾಡಿಲ್ಲ ಎಂದರು. ಚುನಾವಣೆಗೂ ಮುಂಚಿತವಾಗಿ ಈ ಚರ್ಚೆ ಇತ್ತು. ಆದರೆ ನಾನು ಬಿಜೆಪಿ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಲಿಲ್ಲ, ಕೂಡ ಆದರಿಂದ ಯಾವುದೇ ನಿರ್ಧಾರ ಮಾಡಿಲ್ಲ. ಹೋಗುವುದಾದರೆ ಎಲ್ಲರಿಗೂ ಹೇಳಿಯೇ ಹೋಗುತ್ತೇನೆ. ಕದ್ದು ಮುಚ್ಚಿ ನಾನು ಕಾಂಗ್ರೆಸ್ ಸೇರುವುದಿಲ್ಲ ಎಂದರು. ಬಿಜೆಪಿ ಮಾಜಿ ಶಾಸಕಿ 

Donate Janashakthi Media

Leave a Reply

Your email address will not be published. Required fields are marked *