ಡಿಕೆಶಿ ಅವರೇನು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲ, ತಿಹಾರ್ ಜೈಲು ಸೇರಿದ್ದವರು : ಬಸನಗೌಡ ಪಾಟೀಲ್ ಯತ್ನಾಳ್

ಬೆಳಗಾವಿ : ನಗರದಲ್ಲಿಂದು ಪತ್ರಿಕಾ ಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಡಿಕೆ ಶಿವಕುಮಾರ್ ಭ್ರಷ್ಟಾಚಾರ ನಡೆಸಿದ ಕಾರಣಕ್ಕೆ ತಿಹಾರ್ ಜೈಲು ಸೇರಿದ್ದರೇ ಹೊರತು ಅವರೇನು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರಲ್ಲ ಎಂದು ಹೇಳಿದರು.

ಐಟಿ ಮತ್ತು ಈಡಿ ಇಲಾಖೆಗಳು ಕೇವಲ ಭ್ರಷ್ಟರನ್ನು ಮಾತ್ರ ಬೆನ್ನಟ್ಟುತ್ತವೆ ಎಂದು ಅವರು ಮಾರ್ಮಿಕವಾಗಿ ಹೇಳಿದರು. ಮಾಡಾಳ್ ವಿರೂಪಾಕ್ಷಪ್ಪನವರ ಬಗ್ಗೆ ಕೇಳಿದಾಗ, ಬಿಜೆಪಿ ಸರ್ಕಾರ ಲೋಕಾಯುಕ್ತಗೆ ಮುಕ್ತವಾಗಿ ಕೆಲಸ ಮಾಡಲು ಅವಕಾಶ ನೀಡಿದ್ದರಿಂದಲೇ ಮಾಡಾಳ್ ಮನೆಗಳ ಮೇಲೆ ದಾಳಿ ನಡೆದು ಭ್ರಷ್ಟಾಚಾರ ಬಯಲಿಗೆ ಬಂತು ಎಂದರು.

ಇದನ್ನೂ ಓದಿ : ಯತ್ನಾಳ್‌ ಹೇಳಿಕೆ ಗಂಭೀರವಾಗಿ ಪರಿಗಣಿಸಿ-ತನಿಖೆಯಾಗಬೇಕು: ಡಿ.ಕೆ ಶಿವಕುಮಾರ್

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ನಾ ಖಾವೂಂಗಾ ನಾ ಖಾನೆ ದೂಂಗಾ ಅಂತ ಹೇಳಿದ್ದಲ್ಲದೆ ಅದನ್ನು ಕಟ್ಟುನಿಟ್ಟಾಗಿ ಜಾರಿಯಲ್ಲಿಟ್ಟಿದ್ದಾರೆ ಎಂದು ಯತ್ನಾಳ್ ಹೇಳಿದರು.

Donate Janashakthi Media

Leave a Reply

Your email address will not be published. Required fields are marked *