ಹೆರಿಗೆ ಮಾಡುವಾಗ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ಕೊಯ್ದ ವೈದ್ಯ

ದಾವಣಗೆರೆ : ವೈದ್ಯನ ಭಾರೀ ಯಡವಟ್ಟಿಗೆ ಹುಟ್ಟಿದಾಕ್ಷಣ ಮಗುವೊಂದು ಪ್ರಾಣವನ್ನೇ ಕಳೆದುಕೊಂಡ ಘಟನೆ  ದಾವಣಗೆರೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ನಡೆದಿದೆ . ಹೆರಿಗೆ ಮಾಡುವಾಗ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ವೈದ್ಯರು ಕೊಯ್ದಿದ್ದಾರೆ.  ಹೆರಿಗೆ ಹೆರಿಗೆಹೆರಿಗೆ 

ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯಕ್ಕೆ (medical negligence) ಬಲಿಯಾಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ದಾವಣಗೆರೆ ಕೊಂಡಜ್ಜಿ ರಸ್ತೆಯ ಅರ್ಜುನ್ ಪತ್ನಿ ಅಮೃತಾ ರನ್ನು ಹೆರಿಗೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ನಾರ್ಮಲ್‌ ಡೆಲಿವರಿ ಆಗದ ಹಿನ್ನೆಲೆಯಲ್ಲಿ ಸಿಸೇರಿಯನ್ ಮಾಡಲು ವೈದ್ಯರು ಮುಂದಾಗಿದ್ದರು. ಅದರಂತೆ ಕಳೆದ ಜೂನ್ 27ರಂದು ಅಮೃತಾಗೆ ಸಿಸೇರಿಯನ್ ಮಾಡಿ ಮಗು ತೆಗೆಯಲಾಗಿತ್ತು.

ವೈದ್ಯ ನಿಜಾಮುದ್ದೀನ್ ಸಿಸೇರಿಯನ್‌ ಮಾಡುವಾಗ ಮಗು ತೆಗೆಯುವಾಗ ಮರ್ಮಾಂಗವನ್ನೇ ಕೊಯ್ದಿದ್ದಾರೆ. ನಂತರ ಮಗುವಿನ ಸ್ಥಿತಿ ಚಿಂತಾಜನಕವಾಗಿದ್ದರಿಂದ ಕೂಡಲೇ ಜಿಲ್ಲಾಸ್ಪತ್ರೆಯಿಂದ ಬಾಪೂಜಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಶುಕ್ರವಾರ ಮೃತಪಟ್ಟಿದೆ.

ಇದನ್ನೂ ಓದಿ: ಲೈಂಗಿಕ ಹಗರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಎರಡು ವಾರ ಮುಂದೂಡಿದ ಹೈಕೋರ್ಟ್

ಮಗುವಿನ ಸಾವಿಗೆ ವೈದ್ಯರು ಕಾರಣ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದರು. ಜಿಲ್ಲಾಸ್ಪತ್ರೆ ಮುಂದೆ ಪ್ರತಿಭಟಿಸಿ, ಮಗುವಿನ ಸಾವಿಗೆ ಕಾರಣನಾದ ವೈದ್ಯನನ್ನು ಅಮಾನತು ಮಾಡುವಂತೆ ಒತ್ತಾಯಿಸಿದರು.

ಇದನ್ನೂ ನೋಡಿ: ಸಾವಿನ ಸತ್ಸಂಗ..! ದೊಡ್ಡ ಕ್ರಿಮಿನಲ್ ಭೋಲೆ ಬಾಬಾ!!Janashakthi Media

Donate Janashakthi Media

Leave a Reply

Your email address will not be published. Required fields are marked *