ಮಣಿಪುರ: ಎರಡು ವರ್ಷಗಳಿಂದ ಹಿಂಸಾಚಾರಗಳಿಂದ ಅಲ್ಲೋಲಕಲ್ಲೋಲಗೊಂಡಿರುವ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಿಕೆಯು ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಸಂಪೂರ್ಣ ದಿವಾಳಿತನವನ್ನು ಎತ್ತಿ ತೋರಿಸುತ್ತದೆ ಎಂದು ಸಿಪಿಐ(ಎಂ) ಪೊಲಿಟ್ಬ್ಯುರೊ ಹೇಳಿದೆ.
ರಾಷ್ಟ್ರಪತಿ ಆಳ್ವಿಕೆಯನ್ನು ಮಣಿಪುರದ ಹಿತಾಸಕ್ತಿಗಾಗಿ ಅಲ್ಲ, ಬದಲಾಗಿ ಆಳುವ ಕೂಟದೊಳಗಿನ ಆಂತರಿಕ ಸಂಘರ್ಷಗಳನ್ನು ಪರಿಹರಿಸಲು ಸಮಯ ಪಡೆಯಲು ವಿಧಿಸಲಾಗಿದೆ ಎಂದಿರುವ ಅದು, ಪ್ರಮುಖ ಅಪರಾಧಿಯಾಗಿರುವ ಬಿಜೆಪಿ-ಆರ್ಎಸ್ಎಸ್ನಿಂದ ಬೆಂಬಲಿತರಾಗಿದ್ದ ಮುಖ್ಯಮಂತ್ರಿ, ನ್ಯಾಯಾಲಯವು ಅವರ ಪಕ್ಷಪಾತದ ಪಾತ್ರವನ್ನು ಪರಿಶೀಲಿಸುತ್ತಿದ್ದ ಕಾರಣ ರಾಜೀನಾಮೆ ನೀಡಬೇಕಾಯಿತು, ಅಲ್ಲಿ ಅವರ ಪಕ್ಷಪಾತದ ಪಾತ್ರದ ಪುರಾವೆಗಳನ್ನು ಪ್ರಸ್ತುತಪಡಿಸಲಾಯಿತು, ಇದರಿಂದಾಗಿ ಅವರಿಗೆ ರಾಜೀನಾಮೆ ನೀಡುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಎಂದು ಹೇಳಿದೆ.
ಇದನ್ನೂ ಓದಿ: 2008ರ ಮುಂಬೈ ಭಯೋತ್ಪಾದಕ ದಾಳಿ ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸಲು ಒಪ್ಪಿಗೆ – ಮೋದಿ ಎದುರೇ ಟ್ರಂಪ್ ಘೋಷಣೆ
ಈ ಎಲ್ಲಾ ಬೆಳವಣಿಗೆಗಳಲ್ಲಿ, ಆಳುವ ಪಕ್ಷದ ಕೇಂದ್ರ ನಾಯಕತ್ವ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರ ಮೇಲೆ ಹೇರಿದ ಆಳವಾದ ಸಂಕಟವನ್ನು ನಿವಾರಿಸಲು ಅಗತ್ಯವಾದ ಕ್ರಮ ತೆಗೆದುಕೊಳ್ಳಲು ನಿರಾಕರಿಸಿತು. ಪ್ರಧಾನಿಯವರು ತೊಂದರೆಗೊಳಗಾದ ಈ ರಾಜ್ಯಕ್ಕೆ ಭೇಟಿ ನೀಡಲು ಸಹ ನಿರ್ದಯವಾಗಿ ನಿರಾಕರಿಸಿರುವುದು ಇದರ ಪ್ರತೀಕ. ಇದು ತನ್ನ ಸ್ವಂತ ರಾಜಕೀಯ ಹಿತಾಸಕ್ತಿಗಳನ್ನು ರಾಜ್ಯ ಮತ್ತು ಅದರ ಜನರ ಹಿತಾಸಕ್ತಿಗಳಿಗಿಂತ ಮೇಲಿರಿಸಿಕೊಳ್ಳುವ ಆಳುವ ಪಕ್ಷದ ಮತ್ತು ಅದರ ನೇತೃತ್ವದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಂಕುಚಿತ ನಿಲುವನ್ನು ಬಯಲಿಗೆಳೆಯುತ್ತದೆ ಎಂದು ಸಿಪಿಐ(ಎಂ) ಖಮಡಿಸಿದೆ.
ರಾಷ್ಟ್ರಪತಿ ಆಳ್ವಿಕೆ ಯಾವುದೇ ಪರಿಹಾರವಲ್ಲ. ಆದಾಗ್ಯೂ, ಈಗ ಕೇಂದ್ರ ಸರ್ಕಾರವು ತನ್ನ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ವಿವಿಧ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಮಾತುಕತೆ ನಡೆಸುವ ಮೂಲಕ ಆಳವಾದ ವಿಭಜನೆಗಳನ್ನು ಸರಿಪಡಿಸಲು ಕ್ರಮಗಳನ್ನು ತಕ್ಷಣವೇ ಪ್ರಾರಂಭಿಸಬೇಕು, ಎಲ್ಲಾ ರಾಜಕೀಯ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಗಳನ್ನು ಒಂದು ಸಮಯ ಚೌಕಟ್ಟಿನೊಳಗೆ ನಡೆಸುವುದೂ ಸೇರಿದಂತೆ, ರಾಜ್ಯದ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ರಕ್ಷಿಸುವುದರ ಜೊತೆಗೆ ಸಾಮಾನ್ಯ ಸ್ಥಿತಿ, ಶಾಂತಿ ಮತ್ತು ಸಾಮರಸ್ಯವನ್ನು ತರಲು ನ್ಯಾಯಯುತ ಪರಿಹಾರಗಳನ್ನು ತಲುಪಬೇಕು ಎಂದು ಸಿಪಿಐ(ಎಂ) ಪೊಲಿಟ್ಬ್ಯುರೊ ಕರೆ ನೀಡಿದೆ.
ಇದನ್ನೂ ನೋಡಿ: ಪ್ರೇಮಿಗಳ ದಿನದ ವಿಶೇಷ | ನೋಡಿದೇನೆ ಪ್ರೌಢಸುಂದರಿ | ಸಂಗೀತ, ಗಾಯನ : ಪಿಚ್ಚಳ್ಳಿ ಶ್ರೀನಿವಾಸ Janashakthi Media