ಪೆಟ್ರೋಲ್ ಡಿಸೇಲ್ ದರ ಹೆಚ್ಚಳಕ್ಕೆ ಡಿವೈಎಫ್ಐ ಖಂಡನೆ : ಹೆಚ್ಚಿಸಿದ ದರ ಇಳಿಸಲು ಒತ್ತಾಯ

ಬೆಂಗಳೂರು: ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಫ್ಐ) ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ. ಹಾಗೂ ಕೂಡಲೇ ಬೆಲೆ ಏರಿಕೆಯನ್ನು ಹಿಂಪಡೆಯಬೇಕೆಂದು  ರಾಜ್ಯ ಸರಕಾರವನ್ನು ಒತ್ತಾಯಿಸಿದೆ.

ಈ ಕುರಿತು ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ್ ಹೇಳಿಕೆ ನೀಡಿದ್ದು, ಕರ್ನಾಟಕ ಸರಕಾರವು ಪೆಟ್ರೋಲ್‌ ಮತ್ತು ಡೀಜೆಲ್‌ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿರುವುದರಿಂದಾಗಿ ಪೆಟ್ರೋಲ್ ಬೆಲೆ 3 ರೂ, ಡೀಸೆಲ್ ಬೆಲೆ 3 ರೂ. 50 ಪೈಸೆ ಹೆಚ್ಚಳವಾಗಿದೆ. 85 ರೂ 93 ಪೈಸೆಯಿದ್ದ ಡೀಸೆಲ್ ಬೆಲೆ 89 ರೂ. 20 ಪೈಸೆಗೆ ಏರಿಕೆಯಾಗಿದ್ದರೆ, 100 ರೂಪಾಯಿ ಇದ್ದ ಪೆಟ್ರೋಲ್ ದರ 103 ರೂ.ಗೆ ಹೆಚ್ಚಳಗೊಂಡಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಪೂರ್ವ ಪ್ರಾಥಮಿಕ ಶಿಕ್ಷಣ ಅಂಗನವಾಡಿಗಳಲ್ಲಿ ನಡೆಯಲಿ – ಸಿಪಿಐಎಂ ಆಗ್ರಹ

ಪೆಟ್ರೋಲ್, ಡಿಸೇಲ್ ಬೆಲೆಗಳು ದೈನಂದಿನ ಬದುಕಿಗೆ ಜನಸಾಮಾನ್ಯರು ಬಳಸುವ ಅಗತ್ಯ ಸರಕುಗಳ ಮೇಲೆಯೂ ಪರಿಣಾಮ ಬೀರುತ್ತವೆ. ಕಳೆದ ವರ್ಷ ಬರಗಾಲ ಬಿದ್ದಿರುವುದರಿಂದಾಗಿ ಗ್ರಾಮೀಣ ಪ್ರದೇಶದ ಜನತೆ ಸಂಕಷ್ಠವನ್ನು ಎದುರಿಸುತ್ತಿದ್ದಾರೆ.

ಇಂತಹ ಸಂದರ್ಭದಲ್ಲಿ ರಾಜ್ಯ ಸರಕಾರ ತನ್ನ ಆದಾಯ ಹೆಚ್ಚಿಸಿಕೊಳ್ಳಲು ತೈಲ ಬೆಲೆ ಏರಿಸಿರುವುದು ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ. ಪೆಟ್ರೋಲ್-ಡೀಸೆಲ್ ಮೇಲಿನ ಮಾರಾಟ ತೆರಿಗೆ ಏರಿಕೆಯನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಜನತೆ ತೀವ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ನೋಡಿ: ಮೋದಿ 3.O ಸರ್ಕಾರ ತನ್ನ ಹಿಂದಿನ ಸರ್ವಾಧಿಕಾರಿ ನೀತಿ ಮುಂದುವರೆಸುತ್ತದೆಯೇ? Janashakthi Media

Donate Janashakthi Media

Leave a Reply

Your email address will not be published. Required fields are marked *