ಹುಬ್ಬಳ್ಳಿ | ಗುಲಗಂಜಿ ಗಿಡದ ಎಲೆ ತಿಂದು ಮಗು ಅಸ್ವಸ್ಥ : ಔಷಧಿಗಾಗಿ ರಾತ್ರಿ ಪರದಾಟ

ಹುಬ್ಬಳ್ಳಿ: ಶನಿವಾರ ಮಧ್ಯರಾತ್ರಿ ಗುಲಗಂಜಿ ಗಿಡದ ಎಲೆ ತಿಂದು ತೀವ್ರ ಅಸ್ವಸ್ಥಗೊಂಡ ಒಂದೂವರೆ ವರ್ಷದ ಮಗುವಿಗೆ ವೈದ್ಯರು ಸೂಚಿಸಿದ್ದ ಔಷಧಿ ತರಲು, ಪಾಲಕರೊಬ್ಬರು ಔಷಧದ ಅಂಗಡಿಗೆ ಅಲೆದಾಡಿದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಹುಬ್ಬಳ್ಳಿ

ಇದನ್ನೂ ಓದಿ : ಮರಕುಂಬಿ ಪ್ರಕರಣಕ್ಕೆ 1 ವರ್ಷ |ದಲಿತರು ಭಾಗವಹಿಸುತ್ತಾರೆ ಎಂದು ಜಾತ್ರೆಗಳನ್ನೇ ನಿಲ್ಲಿಸಿದರು….

ನರಗುಂದದ ಬಾಲಕಿ ತಸ್ಮಿಯಾ, ಮನೆ ಎದುರು ಆಟವಾಡುತ್ತ ಎದುರಿಗೆ ಬೆಳೆದಿದ್ದ ಗುಲಗಂಜಿ ಗಿಡದ ಎಲೆಯನ್ನು ತಿಂದಿದ್ದಾಳೆ. ಆರೋಗ್ಯದಲ್ಲಿ ಏರುಪೇರಾಗಿದ್ದನ್ನು ಗಮನಿಸಿದ ಪಾಲಕರು ಸ್ಥಳೀಯ ಆಸ್ಪತ್ರೆಗೆ ತೋರಿಸಿ, ಹೆಚ್ಚಿನ ಚಿಕಿತ್ಸೆಗೆ ಕೆಎಂಸಿ–ಆರ್‌ಐ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಬ್ಬಳ್ಳಿ

ಮಧ್ಯರಾತ್ರಿ 12ರ ಸುಮಾರಿಗೆ ಬಾಲಕಿಯ ದೊಡ್ಡಪ್ಪ ದಾವುಲ್‌ಸಾಬ್‌ ಅವರು ವೈದ್ಯರು ಸೂಚಿಸಿದ್ದರು ಎನ್ನಲಾದ ಇಂಜಕ್ಸನ್‌ ತರಲು ಎಚ್‌ಸಿಜಿ ಸುಚಿರಾಯು, ಶುಶ್ರುತ, ವಿವೇಕಾನಂದ ಆಸ್ಪತ್ರೆಗೆ ನಡೆದುಕೊಂಡು ಹೋಗಿದ್ದಾರೆ. ಎಲ್ಲಿಯೂ ಔಷಧಿ ಸಿಗದೆ ಮರಳಿ ಆಸ್ಪತ್ರೆಗೆ ಓಡಿಕೊಂಡು ಹೋಗುತ್ತಿರುವ ವಿಡಿಯೊವನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

‘ತುರ್ತು ಸಂದರ್ಭದಲ್ಲಿ ನೀಡಬೇಕಾದ ಔಷಧಿಗೆ ರಾತ್ರಿ 12ರಿಂದ ಮಧ್ಯರಾತ್ರಿ 2.30ರವರೆಗೂ ಹುಬ್ಬಳ್ಳಿಯ ಎಲ್ಲ ಆಸ್ಪತ್ರೆ ಹಾಗೂ ಔಷಧಿ ಅಂಗಡಿಗಳಿಗೆ ಅಲೆದಾಡಿದ್ದೇನೆ. ಎಲ್ಲಿಯೂ ಸಿಕ್ಕಿಲ್ಲ. ಸದ್ಯ ಮಗುವಿನ ಬಗ್ಗೆ ಏನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ಹೇಳಿದ್ದಾರೆ’ ಎಂದು ದಾವುಲ್‌ಸಾಬ್‌ ಹೇಳಿದರು.

ಈ ಕುರಿತು ಪ್ರತಿಕ್ರಿಯಿಸಿದ ಕೆಎಂಸಿ–ಆರ್‌ಐ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಈಶ್ವರ ಹಸಬಿ, ‘ಮಗುವಿನ ಚಿಕಿತ್ಸೆಗೆ ನಮ್ಮ ವೈದ್ಯರು ಯಾವ ಔಷಧಿಯನ್ನು ಬರೆದುಕೊಟ್ಟಿಲ್ಲ. ಔಷಧಿಯ ಸ್ಕ್ರೀನ್‌ಶಾಟ್‌ ಇಟ್ಟಕೊಂಡು ಪಾಲಕರು ಔಷಧದ ಅಂಗಡಿಗೆ ಅಲೆದಾಡಿದ್ದಾರೆ. ಮಗು ಚೇತರಿಸಿಕೊಳ್ಳುತ್ತಿದೆ. ರಾತ್ರಿ ವೇಳೆ ಯಾರಿಗೂ ಔಷಧಿ ಬರೆದುಕೊಡದಂತೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದರು.

ಇದನ್ನೂ ನೋಡಿ : ದ್ವೇಷ ಭಾಷಣ| ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲು Janashakthi Media

Donate Janashakthi Media

Leave a Reply

Your email address will not be published. Required fields are marked *