ರಾಮಮೂರ್ತಿನಗರ ಪೊಲೀಸ್ ಠಾಣೆ ಮೇಲೆ ಇಡಿ ದಾಳಿ

ಬೆಂಗಳೂರು: ನಗರದ ರಾಮಮೂರ್ತಿನಗರ ಪೊಲೀಸ್ ಠಾಣೆ ಮೇಲೆ ಆಗಸ್ಟ್‌ 16 ರಾತ್ರಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ಇನ್ಸ್‌ಪೆಕ್ಟರ್ ರಾಜಶೇಖರ್, PSI ರುಮಾನ್ ಪಾಷಾ ಮತ್ತು ಖಾಸಗಿ ವ್ಯಕ್ತಿ ಇಮ್ರಾನ್ ಬಾಬು (32) ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ರಾಮಮೂರ್ತಿನಗರ 

ಲೋಕಾಯುಕ್ತ ಎಸ್‌ಪಿ ವಂಶಿಕೃಷ್ಣ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಕಳೆದುಹೋದ ಆಭರಣ ಮತ್ತು ನಗದು ರಿಕವರಿ ಸಂಬಂಧ ದೂರುದಾರ ಮಂಜುನಾಥ್ ಎನ್‌ಸಿಆರ್ (ನಾನ್‌-ಕಾಗ್ನಿಜಬಲ್ ರಿಪೋರ್ಟ್) ದಾಖಲಿಸಿದ್ದರು. ಈ ಪ್ರಕರಣದ ತನಿಖೆಯನ್ನು ಮುಂದುವರಿಸಲು ಮತ್ತು ಆಭರಣವನ್ನು ಹುಡುಕಿ ಕೊಡಲು ಇನ್ಸ್‌ಪೆಕ್ಟರ್ ರಾಜಶೇಖರ್ ಮತ್ತು PSI ರುಮಾನ್ ಪಾಷಾ ₹2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಂಜುನಾಥ್ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದರು.

ಇದನ್ನೂ ಓದಿ: ಮನೆ-ನಿವೇಶನಕ್ಕಾಗಿ ವಸತಿ ರಹಿತರಿಗೆ ನಿವೇಶನಕ್ಕಾಗಿ ಆಗಸ್ಟ್‌ 20 ರಂದು ಪ್ರತಿಭಟನೆ ಕೆಪಿಆರ್ ಎಸ್

ಖಾಸಗಿ ವ್ಯಕ್ತಿಯ ಮೂಲಕ ಲಂಚ ಸ್ವೀಕಾರ

ಇನ್ಸ್‌ಪೆಕ್ಟರ್ ರಾಜಶೇಖರ್ ತನ್ನ ಡ್ರೈವರ್ ಆಗಿ ನೇಮಿಸಿಕೊಂಡಿದ್ದ ಖಾಸಗಿ ವ್ಯಕ್ತಿ ಇಮ್ರಾನ್ ಬಾಬು ಮೂಲಕ ₹1 ಲಕ್ಷ ಮುಂಗಡ ಹಣವನ್ನು ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮೂವರನ್ನು ರೆಡ್‌ಹ್ಯಾಂಡ್‌ ಆಗಿ ಬಂಧಿಸಿದ್ದಾರೆ.

ಲೋಕಾಯುಕ್ತದಿಂದ ವಿಚಾರಣೆ

ಸದ್ಯ ಇನ್ಸ್‌ಪೆಕ್ಟರ್ ರಾಜಶೇಖರ್, PSI ರುಮಾನ್ ಪಾಷಾ ಮತ್ತು ಇಮ್ರಾನ್ ಬಾಬು ಅವರನ್ನು ಬಂಧಿಸಲಾಗಿದ್ದು, ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ನೋಡಿ: ಚುನಾವಣಾ ಆಯೋಗ ಮತ್ತು ವಿಶ್ವಾಸಾರ್ಹತೆ ದೂರ ಬಲು ದೂರ…‌ Janashakthi Media

Donate Janashakthi Media

Leave a Reply

Your email address will not be published. Required fields are marked *