ಮಂಗಳೂರು : ಕೇಂದ್ರ ಸರಕಾರವು ದೇಶದ ಕಾರ್ಮಿಕ ವರ್ಗವನ್ನು ದುರ್ಬಲಗೊಳಿಸಿ ಮತ್ತೆ ಗುಲಾಮಗಿರಿಯತ್ತ ತಳ್ಳಲು, ಕಾರ್ಮಿಕರ ಹಕ್ಕು ಭಾಧ್ಯತೆಗಳನ್ನು ನಾಶ ಮಾಡಲು, ಕಾರ್ಮಿಕ ಚಳುವಳಿಯನ್ನೇ ಹತ್ತಿಕ್ಕಲು ಹಾಗೂ ಬಂಡವಾಳಿಗರ ಹಿತಾಸಕ್ತಿಗಳನ್ನು ಕಾಪಾಡಲು ದೇಶದ ಪ್ರಮುಖ 29 ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸಿ ಕಾರ್ಪೊರೇಟ್ ಪರವಾದ 4 ಸಂಹಿತೆಗಳನ್ನು ರೂಪಿಸಿ ತಕ್ಷಣದಿಂದಲೇ ಜಾರಿಯಾಗುವಂತೆ ಏಕಪಕ್ಷೀಯ ತೀರ್ಮಾನವನ್ನು ಕೈಗೊಂಡಿದೆ.ಆದ್ದರಿಂದ ಇದು ಕೇವಲ ಲೇಬರ್ ಕೋಡ್ ಅಲ್ಲ ಬದಲಾಗಿ ಕಾರ್ಪೊರೇಟ್ ಕೋಡ್ ಆಗಿದೆ ಎಂದರು.
ಈ ಪ್ರತಿಭಟನೆಯಲ್ಲಿ ಸಿಐಟಿಯು ದ.ಕ.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಕಾರ್ಮಿಕ ಸಂಹಿತೆಗಳ ವಿರುದ್ದ ಫೆಬ್ರವರಿ 12 ರಂದು ನಡೆಯಲಿರುವ ಆಖಿಲ ಭಾರತ ಮಹಾಮುಷ್ಕರದ ಪ್ರಚಾರಾರ್ಥವಾಗಿ ಮುಲ್ಕಿಯಿಂದ ಪ್ರಾರಂಭಗೊಂಡ ಪಾದಯಾತ್ರೆಯಲ್ಲಿ ಮಾತನಾಡಿದರು. ರೈತ ವಿರೋಧಿ ಬೀಜ ಮಸೂದೆ ಹಾಗೂ ವಿದ್ಯುತ್ ಮಸೂದೆಯನ್ನು ಜಾರಿಗೊಳಿಸಲು ಹುನ್ನಾರ ನಡೆಸುತ್ತಿರುವ ಕೇಂದ್ರ ಸರಕಾರವು ಎಲ್ಲಾ ಕ್ಷೇತ್ರಗಳನ್ನು ಖಾಸಗೀಕರಣಗೊಳಿಸುವ ಮೂಲಕ ಇಡೀ ದೇಶವನ್ನೇ ಕಾರ್ಪೊರೇಟ್ ಕಂಪೆನಿಗಳ ಪಾದತಲಕ್ಕೆ ಒಪ್ಪಿಸಲು ಸನ್ನದ್ದವಾಗಿದೆ ಎಂದು ಹೇಳಿದರು.
ಇದನ್ನೂ ಓದಿ : ಬೆಂಗಳುರು | ಯುಜಿಸಿ ನಿಯಮಗಳಿಗೆ ಎಸ್ಎಫ್ಐ ಸ್ವಾಗತ
ಸಿಐಟಿಯು ಜಿಲ್ಲಾ ನಾಯಕರಾದ ಯೋಗೀಶ್ ಜಪ್ಪಿನಮೊಗನ ಗ್ರಾಮೀಣ ಜನತೆಯ ಬದುಕಿಗೆ ಪೂರಕವಾಗಿದ್ದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ತಿದ್ದುಪಡಿ ತರುವ ಮೂಲಕ ಸರ್ವನಾಶ ಮಾಡಲು ಹೊರಟಿದೆ.ಒಟ್ಟಿನಲ್ಲಿ ದೇಶದ ಆರ್ಥಿಕತೆಯನ್ನು ಸಂಪೂರ್ಣವಾಗಿ ನಾಶ ಮಾಡಿದ ಕೇಂದ್ರ ಸರ್ಕಾರವು ಜನಸಾಮಾನ್ಯರ ಬದುಕನ್ನು ಕೂಡ ಸಂಕಷ್ಟಕ್ಕೆ ದೂಡಿದೆ ಎಂದು ಹೇಳಿದರು

ಪಾದಯಾತ್ರೆಯಲ್ಲಿ ಬಿ.ಕೆ ಇಮ್ತಿಯಾಜ್ ಹಾಗೂ ಜಯಲಕ್ಷ್ಮಿ, ರವಿಚಂದ್ರ ಕೊಂಚಾಡಿ, ಶ್ರೀನಾಥ ಕಾಟಿಪಳ್ಳ, ತಯ್ಯುಬ್ ಬೆಂಗರೆ,ಪ್ರಮೀಳಾ ಶಕ್ತಿನಗರ,ಸಾಧಿಕ್ ಮುಲ್ಕಿಯವರು ಮುನೀರ್ ಕಾಟಿಪಳ್ಳ, ಪ್ರಗತಿಪರ ಚಿಂತಕರಾದ ಡಾ.ಕೃಷ್ಣಪ್ಪ ಕೊಂಚಾಡಿ, ವಿಮಾ ಪ್ರತಿನಿಧಿ ಸಂಘಟನೆಯ ಜಿಲ್ಲಾ ನಾಯಕರಾದ ರಾಜನ್ ಡಿ ಕೋಸ್ತಾ,CITU ಜಿಲ್ಲಾ ನಾಯಕರಾದ ಜಯಂತಿ ಶೆಟ್ಟಿ, ದಿನೇಶ್ ಶೆಟ್ಟಿ,ಸಂತೋಷ್ ಆರ್ ಎಸ್, ಅಶೋಕ್ ಶ್ರೀಯಾನ್,ನಾಗೇಶ್ ಕೋಟ್ಯಾನ್,ಯುವಜನ ನಾಯಕರಾದ ನವೀನ್ ಕೊಂಚಾಡಿ, ಜಗದೀಶ್ ಬಜಾಲ್,ಆದಿವಾಸಿ ಸಂಘಟನೆಯ ಜಿಲ್ಲಾ ನಾಯಕರಾದ ಕರಿಯ ಕೆ,ಶೇಖರ್ ವಾಮಂಜೂರು, ಕೃಷ್ಣ ಇನ್ನಾ,ದಲಿತ ಸಂಘಟನೆಯ ಮುಖಂಡರಾದ ಕೃಷ್ಣ ತಣ್ಣೀರುಬಾವಿ,ಮಹಿಳಾ ಮುಖಂಡರಾದ ಅಸುಂತ ಡಿಸೋಜ, ಯೋಗಿತಾ,ರೋಹಿಣಿ, ಮುಂತಾದವರು ಉಪಸ್ಥಿತರಿದ್ದರು.
ಇದನ್ನೂ ನೋಡಿ : ಗಣರಾಜ್ಯೋತ್ಸವ 2026 | ಒಕ್ಕೂಟ ವ್ಯವಸ್ಥೆ ಗಂಡಾಂತರದಲ್ಲಿದೆ – ಡಾ. ಎಂ. ಚಂದ್ರ ಪೂಜಾರಿ Janashakthi Media
