ರೈತ ನಾಯಕ ರಾಕೇಶ್ ಟಿಕಾಯತ್‌ಗೆ ಕೊಲೆ ಬೆದರಿಕೆ-ಇಂಜಿನಿಯರ್ ಬಂಧನ

ಲಕ್ನೋ: ಸಂಯುಕ್ತ ಕಿಸಾನ್ ಮೋರ್ಚಾದ ಜಂಟಿ ಸಮಿತಿಯ ಭಾಗವಾಗಿರುವ ಭಾರತೀಯ ಕಿಸಾನ್ ಯೂನಿಯನ್‌ ಸಂಘಟನೆಯ ನಾಯಕ ರಾಕೇಶ್ ಸಿಂಗ್‌ ಟಿಕಾಯತ್‌ ಅವರಿಗೆ ಕೆಲವು ದಿನಗಳಿಂದ ಕೊಲೆ ಬೆದರಿಕೆಯ ಕರೆಗಳು ಬರುತ್ತಿದ್ದು, ಉತ್ತರ ಪ್ರದೇಶದ ಗಾಝಿಯಾಬಾದ್ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರವು ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿರುವ ರಾಷ್ಟ್ರೀಯ ರೈತ ನಾಯಕ ರಾಕೇಶ್ ಸಿಂಗ್‌ ಟಿಕಾಯತ್‌ ಅವರಿಗೆ ಕೊಲೆ ಬೆದರಿಕೆ ಹಾಕಲಾಗಿದೆ.

ಇದನ್ನು ಓದಿ: ಕೃಷಿ ಕಾಯ್ದೆ ರದ್ದತಿಗಾಗಿ ಆಗ್ರಹಿಸಿ ಕೇಂದ್ರದ ವಿರುದ್ಧ ಕರಾಳ ದಿನಾಚರಣೆ

ಕೊಲೆ ಬೆದರಿಕೆಗೆ ಸಂಬಂಧಿಸಿದಂತೆ ಕೌಸಂಭಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿಂದೆಯೂ ವಾಟ್ಸ್‌ಆಪ್‌ ಮೂಲಕ ಕರೆಗಳು ಬರುತ್ತಿರುವುದಾಗಿ ರಾಕೇಶ್ ಟಿಕಾಯತ್ ಪೊಲೀಸರ ಗಮನಕ್ಕೆ ತಂದಿದ್ದರು. ತನಿಖೆಯನ್ನು ಕೈಗೊಂಡ ಪೊಲೀಸರು ಜಿತೇಂದ್ರ ಎಂಬ ಎಂ.ಟೆಕ್ ಪದವೀಧರನನ್ನು ಬಂಧಿಸಿದ್ದಾರೆ.

ಜನಕ್‌ಪುರಿಯ ವಾಸಿಯಾದ ಜಿತೇಂದ್ರ, ಕಳೆದ ಏಪ್ರಿಲ್‌ ತಿಂಗಳಿನಿಂದಲೂ ಟಿಕಾಯಿತ್‌ಗೆ, ಪ್ರತಿಭಟನೆ ನಿಲ್ಲಿಸಬೇಕು ಇಲ್ಲವಾದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆಯ ಸಂದೇಶಗಳನ್ನು ಕಳಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ. ಐಪಿಸಿ ಸೆಕ್ಷನ್ 507 (ಕ್ರಿಮಿನಲ್ ಬೆದರಿಕೆ) ಮತ್ತು ಐಟಿ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಇದನ್ನು ಓದಿ: ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಪಾಯಕಾರಿ ಮತ್ತು ಪ್ರತಿಗಾಮಿ ನಿಯಮಗಳನ್ನು ತೆಗೆದುಹಾಕಬೇಕು-ಸಿಪಿಐ(ಎಂ) ಪೊಲಿಟ್‌ಬ್ಯುರೊ

ಆರೋಪಿ ತನ್ನ 20 ರ ದಶಕದಲ್ಲಿ ಜನಕ್‌ಪುರಿಯಲ್ಲಿ ವಾಸಿಸುತ್ತಾನೆ. ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳದಿದ್ದಲ್ಲಿ ಸಾವಿನ ಬೆದರಿಕೆಗಳು ಸೇರಿದಂತೆ ಏಪ್ರಿಲ್‌ನಿಂದ ಆತ ಟಿಕಾಯತ್‌ ಅವರಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದನೆಂದು ಪೊಲೀಸರು ತಿಳಿಸಿದ್ದಾರೆ.

“ರೈತ ಮುಖಂಡರಿಗೆ ಬೆದರಿಕೆ ಸಂದೇಶ ಬರುತ್ತಿರುವ ಬಗ್ಗೆ ನಮಗೆ ದೂರು ಬಂದಿತ್ತು. ನಾವು ದೂರವಾಣಿ ಸಂಖ್ಯೆ ಮತ್ತು ಇತರ ವಿವರಗಳನ್ನು ಜಾಡು ಹಿಡಿದು ದೆಹಲಿಯನ್ನು ಬಂಧಿಸಿದ್ದೇವೆ. ಆರೋಪಿಯು ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದನೆಂದು ತೋರುತ್ತದೆ, ಅದು ಆ ಬೆದರಿಕೆಗಳನ್ನು ಕಳುಹಿಸಲು ಕಾರಣವಾಯಿತು. ಅವರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗುವುದು ಮತ್ತು ಇತರ ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಲಾಗುವುದು ” ಎಂದು ಕೌಸಂಭಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೇ 26ರಂದು ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ 6 ತಿಂಗಳು ಪೂರೈಸಿದ ಹಿನ್ನೆಲೆಯಲ್ಲಿ ಕರಾಳ ದಿನ ಆಚರಿಸಲಾಗಿತ್ತು. ಇದೇ ವೇಳೆ ರಾಕೇಶ್ ಟಿಕಾಯತ್, ಕೃಷಿ ಕಾಯ್ದೆ ಜಾರಿ ವಿರುದ್ಧ ಹೋರಾಟ ಮುಂದುವರೆಸುವುದಾಗಿ ಘೋಷಿಸಿದರು. ಇದೇ ಸಂದರ್ಭದಲ್ಲಿ ದೇಶದ್ಯಂತ ದೊಡ್ಡ ಪ್ರತಿರೋಧ ವ್ಯಕ್ತವಾಗಿತ್ತು. ಇದೇ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶನ ಮಾಡಿ, ಸರ್ಕಾರದ ಪ್ರತಿಕೃತಿ ದಹನ ಮಾಡಿದ್ದರು.

Donate Janashakthi Media

Leave a Reply

Your email address will not be published. Required fields are marked *