ಈಜಲು ಹೋಗಿದ್ದ ಯುವಕ, ಸ್ನೇಹಿತರ ಕಣ್ಣೆದುರೇ ನೀರು ಪಾಲು

ಮಹಾರಾಷ್ಟ್ರ : ಯುವಕನೊಬ್ಬ ನೀರಿನಲ್ಲಿ ಈಜಲು ಹೋಗಿ  ಸ್ನೇಹಿತರ ಎದುರೇ ನದಿಯ ನೀರಿನಲ್ಲಿ ಕೊಚ್ಚಿಹೋದಂತಹ ಘಟನೆ ಮಹಾರಾಷ್ಟ್ರದ ರತ್ನಗಿರಿಯಲ್ಲಿ ನಡೆದಿದೆ.

ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿದ್ದು, ಜಲಾಶಯಗಳು ಭರ್ತಿಯಾಗಿದ್ದು, ನದಿಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. ರತ್ನಗಿರಿ ಜಿಲ್ಲೆ ಸೇರಿದಂತೆ ಹಲವೆಡೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನು ಓದಿ : 2027ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಕಡಿಮೆ: ಬಿಜೆಪಿ ಶಾಸಕ ರಮೇಶ್

ಎಚ್ಚರಿಕೆ ನೀಡಿದರೂ ನಿರ್ಲಕ್ಷ್ಯ ಮಾಡಿ ನದಿಯಲ್ಲಿ ಈಜಲು ಇಳಿದಿದ್ದ ಯುವಕ ದುರಂತಕ್ಕೀಡಾಗಿದ್ದಾನೆ.

ನೀರುಪಾಲಾದ ವ್ಯಕ್ತಿ ಜಯೇಶ್ ರಾಮಚಂದ್ರ ಅಂಬೆ (32) ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ನದಿ ಬಳಿ ಬಂದಿದ್ದ ಹುಡುಗ ಈಜಲೆಂದು ನದಿಗೆ ಇಳಿದಿದ್ದಾನೆ. ನದಿಯಲ್ಲಿ ಏಕಾಏಕಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು, ನೋಡ ನೋಡುತ್ತಿದ್ದಂತೆ ಹುಡುಗ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಆತನನ್ನು ರಕ್ಷಿಸಲು ಹುಡುಗ ರು ಪ್ರಯತ್ನಿಸಿದ್ದರಾದರೂ ಸಾಧ್ಯವಾಗಿಲ್ಲ. ಸ್ಥಳಕ್ಕೆ ರಕ್ಷಣಾ ತಂಡ ಧಾವಿಸಿದ್ದು, ಹುಡುಗನಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗಿದೆ.

ಇದನ್ನು ನೋಡಿ : ಕಳೆದ ಹತ್ತು ವರ್ಷಗಳಲ್ಲಿ ಹಂಚಿಕೆಯಾದ 2.5 ಲಕ್ಷ ಕೋಟಿ ಎಸ್ ಸಿಎಸ್ ಪಿ/ ಟಿಎಸ್ ಪಿ ಮೊತ್ತದ ಲೆಕ್ಕ ಕೊಡಬೇಕಲ್ಲವೇ?

Donate Janashakthi Media

Leave a Reply

Your email address will not be published. Required fields are marked *