ಕೊಪ್ಪಳ| ಎರಡು ಕುಟುಂಬಗಳ ನಡುವೆ ಜಗಳ; ಓರ್ವ ಕೊಲೆ

ಕೊಪ್ಪಳ: ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದಲ್ಲಿ ಆಸ್ತಿ ವಿಚಾರವಾಗಿ ಎರಡು ಕುಟುಂಬಗಳ ನಡುವಿನ ಜಗಳದಲ್ಲಿ ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಂದ ಘಟನೆ ಮೇ 31 ಶನಿವಾರ ರಾತ್ರಿ ನಡೆದಿದೆ.

ಕೊಲೆಯಾದ ವ್ಯಕ್ತಿ ಚೆನ್ನಪ್ಪ ಹರಿಜನ್ (30) ಎಂದು ಗುರುತಿಸಲಾಗಿದೆ. ಪಟ್ಟಣದ ಹಳೆ ಬಸ್ ನಿಲ್ದಾಣದ ಬೇಕರಿ ಮುಂದೆ ಘಟನೆ ನಡೆದಿದ್ದು,ಈ ಕೊಲೆಗೆ ಹಳೆ ದ್ವೇಷವೇ ಮುಖ್ಯ ಕಾರಣ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಕುರಿಗಾಹಿಗಳಿಗೆ ಜೀವದ ರಕ್ಷಣೆಗೆ ಬಂದೂಕು ಪರವಾನಗಿ ಕೊಡಬೇಕು: ಸಿಎಂ ಸಿದ್ದರಾಮಯ್ಯ

ಘಟನೆಗೆ ಸಂಬಂಧಿಸಿ ರವಿ ನಾರಿನಾಳ, ಪ್ರದೀಪ ನಾರಿನಾಳ, ಮಂಜುನಾಥ ನಾರಿನಾಳ, ನಾಗರಾಜ ನಾರಿನಾಳ ಸಹಿತ ಹತ್ತು ಮಂದಿಯ ವಿರುದ್ಧ ತಾವರಗೇರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಕೊಪ್ಪಳ ಎಸ್ಪಿ ಡಾ. ಎಲ್.ಆ‌ರ್. ಅರಸಿದ್ದಿ, ಗಂಗಾವತಿ ಡಿಎಸ್ಪಿ ಸಿದ್ದಲಿಂಗಪ್ಪ ಗೌಡ, ಸಿಪಿಐ ಯಶವಂತ್ ಬಿಸನಹಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ನೋಡಿ: ಬಾನು ಮುಷ್ತಾಕ್​ಗೆ ಬೂಕರ್ ಪ್ರಶಸ್ತಿ | ಮೂಲಭೂತವಾದಿಗಳಿಗೆ ಕಪಾಳಮೋಕ್ಷ – ಕೆ.ವಿ.ಪ್ರಭಾಕರ್ Janashakthi Media

Donate Janashakthi Media

Leave a Reply

Your email address will not be published. Required fields are marked *