‘ದಾವಣಗೆರೆ ಬಂದ್‌’: ಬಿಜೆಪಿ ಮುಖಂಡ ಲೋಕಿಕೆರೆ ನಾಗರಾಜ್ ವಿರುದ್ಧ ದೂರು ದಾಖಲು

ದಾವಣಗೆರೆ: ಬಿಜೆಪಿ ರೈತ ಮೋರ್ಚಾದ ರಾಜ್ಯ ಘಟಕದ ಉಪಾಧ್ಯಕ್ಷ ಲೋಕಿಕೆರೆ ನಾಗರಾಜ್ ವಿರುದ್ಧ ಕೈಯಲ್ಲಿ ಕಲ್ಲು ಹಿಡಿದು ಜನರಲ್ಲಿ ಭೀತಿ ಸೃಷ್ಟಿಸಿ ಒತ್ತಾಯ ಪೂರ್ವಕವಾಗಿ ‘ದಾವಣಗೆರೆ ಬಂದ್‌’ ನಡೆಸಿದ ಆರೋಪದಡಿ ಕೆಟಿಜೆ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಭದ್ರಾ ಬಲದಂಡೆ ನಾಲೆ ಸೀಳಿ ಚಿಕ್ಕಮಗಳೂರು ಹಾಗೂ ಚಿತ್ರದುರ್ಗ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸುವುದನ್ನು ವಿರೋಧಿಸಿ ಬಿಜೆಪಿ ರೈತ ಮೋರ್ಚಾ ಮತ್ತು ಜಿಲ್ಲಾ ರೈತ ಒಕ್ಕೂಟದ ವತಿಯಿಂದ ಜೂನ್‌ 28 ಶನಿವಾರದಂದು ‘ದಾವಣಗೆರೆ ಬಂದ್‌’ಗೆ ಕರೆನೀಡಲಾಗಿತ್ತು.

ಇದನ್ನೂ ಓದಿ: ಹುತಾತ್ಮ ಸಂಗಾತಿ ಶ್ರೀನಿವಾಸ್ ಬಜಾಲ್ ನೆನಪಿನಲ್ಲಿ 23ನೇ ವರುಷದ ರಕ್ತದಾನ ಶಿಬಿರ

ಈ ವೇಳೆ ಕೆಲವರು ಬಸ್‌ ಮತ್ತು ಆಟೊ ಚಾಲಕರು ಹಾಗೂ ವ್ಯಾಪಾರಿಗಳನ್ನು ಬೆದರಿಸಿದ್ದರು.

‘ಉದ್ದೇಶ ಪೂರ್ವಕವಾಗಿ ಭೀತಿ ಸೃಷ್ಟಿಸಿದ ಮತ್ತು ಅಪರಾಧಿಕ ಕೃತ್ಯದಲ್ಲಿ ತೊಡಗಿದ ಆರೋಪದ ಮೇರೆಗೆ ಲೋಕಿಕೆರೆ ನಾಗರಾಜ್‌ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

ಇದನ್ನೂ ನೋಡಿ: ವಿಶೇಷ ವಿವಾಹ ಕಾಯಿದೆ, 1954: ನೀವು ತಿಳಿದುಕೊಳ್ಳಬೇಕಾದ ಮಾಹಿತಿಗಳು – ಅಶ್ವಿನಿ ಓಬುಳೇಶ್‌ ಅವರ ವಿಶ್ಲೇಷಣೆ

Donate Janashakthi Media

Leave a Reply

Your email address will not be published. Required fields are marked *