ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸುವ ಕಾರ್ಯದಲ್ಲಿ ತೊಡಗಿಸದಂತೆ ಎಚ್ಚರಿಕೆ ನೀಡಿದೆ.
ಈ ಆದೇಶವನ್ನು ಉಲ್ಲಂಘಿಸಿದರೆ ಸಂಬಂಧಿಸಿದ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸುವುದು ಸೇರಿದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
ಇದನ್ನು ಓದಿ:ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿಯಾಗಿ ಎಂಎ ಬೇಬಿ ಆಯ್ಕೆ
ಈ ಕ್ರಮವನ್ನು ತೆಗೆದುಕೊಳ್ಳಲು ಕಾರಣ, ಬೆಂಗಳೂರಿನ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸಲು ಒತ್ತಾಯಿಸಿದ ಘಟನೆ ನಡೆದಿದೆ. ಈ ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಸಾಮಾಜಿಕ ಕಾರ್ಯಕರ್ತ ನಾಗೇಶ್ ಅವರ ದೂರು ಮೇರೆಗೆ ಮಾರ್ಚ್ 29 ರಂದು ಶಾಲಾ ಮುಖ್ಯೋಪಾಧ್ಯಾಯಿನಿ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ವಿರುದ್ಧ ಬಾಲ ನ್ಯಾಯ ಕಾಯ್ದೆಯಡಿ ಪೊಲೀಸ್ ಪ್ರಕರಣ ದಾಖಲಾಗಿದೆ.
2023ರಲ್ಲಿ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳನ್ನು ಶೌಚಾಲಯ ಸ್ವಚ್ಛಗೊಳಿಸಲು ಬಳಸಬಾರದು ಎಂಬ ಸೂಚನೆ ನೀಡಿದರೂ, ಕೆಲವು ಶಾಲೆಗಳು ಈ ಆದೇಶವನ್ನು ಉಲ್ಲಂಘಿಸುತ್ತಿವೆ ಎಂದು ಇಲಾಖೆ ಗಮನಿಸಿದೆ.
ಇದನ್ನು ಓದಿ:ಸಿಪಿಐ(ಎಂ) ಅಖಿಲ ಭಾರತ 24ನೇ ಮಹಾಧಿವೇಶನ