ಗುಂಡ್ಲುಪೇಟೆ: ಐವರು ರೈತರ ಮೇಲೆ ಎಫ್ಐಆರ್ ದಾಖಲಾಗಿದೆ. ಹುಲಿ, ಚಿರತೆ ಉಪಟಳಕ್ಕೆ ಬೇಸತ್ತು ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಬೋನಿನಲ್ಲಿ ಬಂಧಿಸಿ ಆಕ್ರೋಶ ಹೊರಹಾಕಿದ್ದ ಘಟನೆಗೆ ಸಂಬಂಧಿಸಿದಂತೆ ಪರಿಸರವಾದಿ ಜೋಸೆಫ್ ಹೂವರ್ ಕಿಡಿಕಾರಿದ್ದಾರೆ. ಗುಂಡ್ಲುಪೇಟೆ
ಇದನ್ನೂ ಓದಿ: ಎಥನಾಲ್ ಮಿಶ್ರಿತ ಪೆಟ್ರೋಲ್ ಕುರಿತು ಕೋಲಾಹಲ
ಕಳೆದ ಹಲವು ದಿನಗಳ ಹಿಂದೆ ಮಂಗಲ ಸಮೀಪ ಬೆಂಗಳೂರು ಮೂಲದ ವ್ಯಕ್ತಿ ಜಮೀನು ರಕ್ಷಣೆಗೆ ಬ್ಲೇಡ್ ಬೇಲಿ ಹಾಕಿದ್ದನು. ಇದು ಬೆಳಕಿಗೆ ಬಂದು ಆತನಿಂದ ಬ್ಲೇಡ್ ಬೇಲಿ ತೆರವು ಮಾಡಿ ಅಪಾಲಜಿ ಪಡೆದಿದ್ದರು. ಈಗ ಅರಣ್ಯ ಇಲಾಖೆ ನಿರ್ಲಕ್ಷ್ಯಕ್ಕಾಗಿರುವ ಘಟನೆಗೆ ರೈತರ ಮೇಲೆ ಎಫ್ ಐಆರ್ ಹಾಕಿರುವುದು ಸರಿಯಲ್ಲ ಎಂದರು.
ರೈತರಿದ್ದರಷ್ಟೇ ಕಾಡು ಎಂಬುದನ್ನು ಅರಣ್ಯ ಇಲಾಖೆ ತಿಳಿದುಕೊಳ್ಳಬೇಕು, ಈಗ ಕಾಡು ಏನಾದರೂ ಉಳಿದಿದ್ದರೇ ಅದು ರೈತರಿಂದ ಮಾತ್ರ, ಅರಣ್ಯ ಇಲಾಖೆಯು ಕಾಡಂಚಿನ ಗ್ರಾಮಸ್ಥರು, ರೈತರ ಜೊತೆ ಉತ್ತಮ ಸಂಬಂಧ- ಸ್ಪಂದನೆ ಇರಿಸಿಕೊಳ್ಳಬೇಕು, ಎಫ್ ಐಆರ್ ದಾಖಲಿಸಿರುವುದು ಸರಿಯಲ್ಲ, ರೈತರಿಗೆ ಅಷ್ಟು ನೋವಿದ್ದಿದ್ದಕ್ಕೆ ಘಟನೆ ಆಗಿದೆ ಎಂದರು.
ಇದನ್ನೂ ನೋಡಿ: ಧರ್ಮಸ್ಥಳ ನಿಗೂಢಗಳು | ಎಸ್ಐಟಿ ತನಿಖೆಗೆ ಅಡ್ಡಿಪಡಿಸಿದವರ ಮೇಲೆ ಕ್ರಮ ಜರುಗಿಸಬೇಕು – ಹಿರಿಯ ವಕೀಲ ಬಿ.ಟಿ. ವೆಂಕಟೇಶ್
