ಅನಾರೋಗ್ಯದಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಕಲಾಪಕ್ಕೆ ಗೈರು

ಬೆಂಗಳೂರು: ಸೋಮವಾರ ನಡೆದ ರಾಜ್ಯಸಭೆ ಕಲಾಪದಲ್ಲಿ ಅನಾರೋಗ್ಯದ ಸಮಸ್ಯೆಯಿಂದ ಭಾಗಿಯಾಗಲು ಸಾಧ್ಯವಾಗಲಿಲ್ಲ ಎಂದು ರಾಜ್ಯಸಭೆ ಸದಸ್ಯರೂ ಆಗಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

ಈ ಕುರಿತು ಪ್ರತಿಕಾ ಹೇಳಿಕೆ ನೀಡಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಬೆಂಗಳೂರಿನಲ್ಲಿ ಜೆಡಿಎಸ್‌ ಪಕ್ಷದ ಮಹತ್ವದ ಸಭೆಯನ್ನು ಆಯೋಜಿಸಲಾಗಿತ್ತು.ಸೊಂಟದ ನೋವಿನ ಕಾರಣ ಬಹಳ ಹೊತ್ತು ಕುಳಿತುಕೊಳ್ಳಲು ತಮ್ಮಿಂದ ಆಗಲಿಲ್ಲ.ಹತ್ತು ನಿಮಿಷವಷ್ಟೇ ಆ ಸಭೆಗೆ ಹಾಜರಾಗಿ ನಂತರ ವೈದ್ಯರಲ್ಲಿ ಚಿಕಿತ್ಸೆ ಪಡೆದು ಮನೆಗೆ ವಾಪಸಾಗಿ ವಿಶ್ರಾಂತಿ ಪಡೆಯಿತ್ತಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:ನಾಳೆಯಿಂದ ಲೋಕಸಭೆಯಲ್ಲಿ ಅವಿಶ್ವಾಸ ಚರ್ಚೆ : ರಾಹುಲ್‌ ಗಾಂಧಿ ಭಾಷಣ

ನೋವು ಕಡಿಮೆಯಾದರೆ ಬುಧವಾರ ಕಲಾಪದಲ್ಲಿ ಭಾಗಿಯಾಗುವುದಾಗಿ ಅವರು ಹೇಳಿದ್ದು ಈ ಮಧ್ಯೆ ಮನೆಯಲ್ಲೇ ಕುಳಿತು ಕಲಾಪ ವೀಕ್ಷಿಸಿದರು.

Donate Janashakthi Media

Leave a Reply

Your email address will not be published. Required fields are marked *