ಜೀತಕ್ಕಿದ್ದ ನಾಲ್ವರು ಕಾರ್ಮಿಕರು – ಮೂವರು ಮಕ್ಕಳ ರಕ್ಷಿಣೆ: ತಹಸೀಲ್ದಾರ್ ನೇತೃತ್ವದ ತಂಡ

ಹಾರೋಹಳ್ಳಿ: ತಹಸೀಲ್ದಾರ್ ನೇತೃತ್ವದ ತಂಡ ತಾಲ್ಲೂಕಿನ ಟಿ. ಹೊಸಹಳ್ಳಿಯ ತೋಟದ ಮನೆಯೊಂದರಲ್ಲಿ ಜೀತಕ್ಕಿದ್ದ ನಾಲ್ವರು ಕಾರ್ಮಿಕರು ಹಾಗೂ ಮೂವರು ಮಕ್ಕಳನ್ನು ಜನವರಿ 13ರಂದು ರಕ್ಷಿಸಿದೆ. ಸಂತ್ರಸ್ತ ಕಾರ್ಮಿಕರಿಗೆ ತಾತ್ಕಾಲಿಕವಾಗಿ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯದಲ್ಲಿ ಆಶ್ರಯ ಕಲ್ಪಿಸಲಾಗಿದೆ.

ತಮಿಳುನಾಡಿನ ಧರ್ಮಪುರಿ ಮೂಲದ ಮಾದೇಶ(30),ಮಾದಮ್ಮ(26),ಮುನಿಯಪ್ಪ(28),ಮುನಿಯಮ್ಮ(24) ಹಾಗೂ ಮೂವರು ಮಕ್ಕಳನ್ನು ರಕ್ಷಿಸಲಾಗಿದೆ. ಜೀತ ಕಾರ್ಮಿಕರ ಬಗ್ಗೆ ತಹಸೀಲ್ದಾರ್‌ಗೆ ದೂರು ಬಂದಿತ್ತು.

ಇದನ್ನೂ ಓದಿ: ವಲಸೆ ಕಾರ್ಮಿಕನ ಮೇಲೆ ಹಲ್ಲೆ ಪ್ರಕರಣ: 3 ಆರೋಪಿಗಳ ಬಂಧನ

ಕಾರ್ಮಿಕರ ವೇತನದ ಬಗ್ಗೆ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ಜೀತಕ್ಕೆ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಉಪ ವಿಭಾಗಾಧಿಕಾರಿಗಳು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಹಸೀಲ್ದಾರ್ ಹರ್ಷವರ್ಧನ್ ಮಾಹಿತಿ ನೀಡಿದ್ದಾರೆ.

ಕಾರ್ಮಿಕ ಅಧಿಕಾರಿ ಚಂದ್ರು, ಜೀಶನ್, ರಾಜಸ್ವ ನಿರೀಕ್ಷಕ ಪ್ರಕಾಶ್ ದಾಳಿಯಲ್ಲಿ ಭಾಗವಹಿಸಿದ್ದರು.

ಇದನ್ನೂ ನೋಡಿ: ಸದಾಚಾರ ಅಂದ್ರೆ ರೇಪ್ ಆ್ಯಂಡ್ ಮರ್ಡರ್ ಮಾಡಿದವರಿಗೆ ಹೂ ಹಾರ ಹಾಕುವುದೇ? – ಎಂ.ಜಿ.ಹೆಗಡೆ Janashakthi Media

Donate Janashakthi Media

Leave a Reply

Your email address will not be published. Required fields are marked *