ಗಾಂಧಿ ಹುತಾತ್ಮ ದಿನದ ಅಂಗವಾಗಿ ಸೌಹಾರ್ದ ಮಾನವ ಸರಪಳಿ

ಹಾಸನ : ಜನವರಿ 30, 2024 ರಂದು ಗಾಂಧಿ ಹುತಾತ್ಮ ದಿನದ ಅಂಗವಾಗಿ ಸೌಹಾರ್ದ ಮಾನವ ಸರಪಳಿ ಮತ್ತು ಸೌಹಾರ್ದ ಸಭೆಗಳು ನಡೆಯಲಿವೆ ಎಂದು ಹಿರಿಯ ಸಾಹಿತಿ ಬಾನುಮುಷ್ತಾಕ್ ತಿಳಿಸಿದರು. ಗಾಂಧಿ

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಲವು ದಶಕಗಳಿಂದಲೂ ಕರ್ನಾಟಕವನ್ನು `ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಹೆಮ್ಮೆಯಿಂದ ಕರೆಯುತ್ತಾ ಬಂದ ಹಿರಿಮೆಗೆ ಈಗಾಗಲೇ ಗಂಭೀರ ಧಕ್ಕೆ ಬಂದೊದಗಿರುವುದು ನಿಚ್ಚಳವಾಗಿದೆ. ಜನರನ್ನು ಮತಾಂಧತೆಯ ಆಧಾರದಲ್ಲಿ ಜಾತಿ-ಮತಧರ್ಮಗಳ ಹೆಸರಿನಲ್ಲಿ ವಿಭಜಿಸುವ ಶಕ್ತಿಗಳಿಂದ ನಮ್ಮ ಸಾಮಾಜಿಕ ಸೌಹಾರ್ದತೆಗೆ ತೀವ್ರವಾದ ಹಾನಿಯಾಗಿದೆ. ಮತೀಯ ದ್ವೇಷ-ಹಗೆತನದ ಭಾವನೆಗಳು ಸಾಮಾನ್ಯ ಜನರ ಮನಸ್ಸನ್ನು ಆವರಿಸಿಕೊಳ್ಳುತ್ತಿರುವ ವಿಷಮ ಗಳಿಗೆಯಲ್ಲಿ ನಾವು ಹಾದು ಹೋಗುತ್ತಿದ್ದೇವೆ. ದೇವರು, ಮತಧರ್ಮ ಮುಂತಾದವುಗಳನ್ನು ಸಂಕುಚಿತ ಉದ್ದೇಶಗಳಿಗೆ ಎಗ್ಗಿಲ್ಲದೇ ಬಳಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.ಗಾಂಧಿ

ದೇಶದಲ್ಲಿ ರಾಷ್ಟ್ರಪಿತ ಮಹಾತ್ಮಗಾಂಧಿಯವರನ್ನು ಒಂದು ಚಿಂತನೆಯು ಇಂದು ರಾಜಕೀಯ ಅಧಿಕಾರವನ್ನು ನಡೆಸುತ್ತಿದ್ದು ಅದೇ ಚಿಂತನೆಯನ್ನು ಎಲ್ಲರ ಮೇಲೆ ಹೇರುವ ಪ್ರಯತ್ನ ನಡೆಯುತ್ತಿದೆ. ಸಂಸತ್ ಭವನದ ಉಧ್ಘಾಟನೆಯನ್ನು ಒಂದು ಧರ್ಮದ ಗುರುಗಳಿಂದ ಉಧ್ಘಾಟಿಸುವುದು, ಒಂದು ಧರ್ಮದ ದೇವಸ್ಥಾನದ ಉಧ್ಘಾಟನೆಯನ್ನು‌ ಸ್ವತಹ ಪ್ರಧಾನಿಗಳೇ ಉಧ್ಘಾಟಿಸುವುದು ಇದು ಭಾರತದ ಪ್ರಜಾಪ್ರಭುತ್ವ ಮತ್ತು‌ ಸಂವಿಧಾನದ ಕಗ್ಗೊಲೆಯಾದಂತೆ. ಎಂದರು.

ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್‌ ಮಾತನಾಡಿ, ದಿನ ನಿತ್ಯದ ದ್ವೇಷ ಭಾಷೆಯಿಂದ ನಮ್ಮ ಸಾಮಾಜಿಕ, ಮತೀಯ ದ್ವೇಷದ ಜೊತೆಗೆ ಅಸ್ಪೃಶ್ಯತೆ, ಜಾತೀಯ ದಮನ, ಮಹಿಳೆಯರ ಮೇಲಿನ ದೌರ್ಜನ್ಯ, ಆರ್ಥಿಕ ಅಸಮಾನತೆಗಳ ತೀವ್ರತೆಯೂ ಸೌಹಾರ್ದದ ವಾತಾವರಣವನ್ನು ಮತ್ತಷ್ಟು ಕಲುಷಿತಗೊಳಿಸುತ್ತಿವೆ. ಇಂತಹ ಸಂದರ್ಭದಲ್ಲಿ ಶತ ಶತಮಾನಗಳ ಇತಿಹಾಸವುಳ್ಳ ಕರ್ನಾಟಕದ ಸೌಹಾರ್ದ ಪರಂಪರೆಯನ್ನು ಹಾಗೂ ಜನ ಸಂಸ್ಕೃತಿಯನ್ನು ಗುರುತಿಸಿ ಅದನ್ನು ಮುನ್ನೆಲೆಗೆ ತರುವ  ಅವಶ್ಯಕತೆ ಇದೆ ಎಂದರು.  ಗಾಂಧಿ

ಇದನ್ನು ಓದಿ : ಸಹಯಾನ ಸಾಹಿತ್ಯೋತ್ಸವ : ʻಆರ್‌ ವಿ ಭಂಡಾರಿʼ ಮಕ್ಕಳ ಸಂವೇದನೆಗಳಿಗೆ ದನಿಯಾದರು

ಪ್ರಸ್ತುತ ಸಮಾಜದಲ್ಲಿ ಸ್ನೇಹಪರತೆ, ಸೌಹಾರ್ದತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಾಳಜಿಯುಳ್ಳವರೆಲ್ಲಾ ಒಂದೆಡೆ ಕಲೆತು, ಕುಳಿತು ಕಾರ್ಯಯೋಜನೆ ರೂಪಿಸಿ, ಸೌಹಾರ್ದತೆಯ ಸಂದೇಶವನ್ನು ಜನರ ನಡುವೆ ನಿರಂತರ ಕೊಂಡೊಯ್ಯುವ ಹಲವು ಕಾರ್ಯಕ್ರಮಗಳನ್ನು ಯೋಜಿಸಲಾಗಿದ್ದು, ಸೌಹಾರ್ದ ಪರಂಪರೆಯ ಉಳಿಸುವ, ಬೆಳೆಸುವ ಅಭಿಯಾನವನ್ನು ನಿರಂತರವಾಗಿ ನಡೆಸಲಾಗುವುದು. ನಮ್ಮ ಜನಜೀವನದಲ್ಲಿ, ಆಚಾರ ವಿಚಾರಗಳಲ್ಲಿ ಹಾಸುಹೊಕ್ಕಾಗಿರುವ ಸೌಹಾರ್ದತೆಯ ಪರಂಪರೆಯನ್ನು ಅರಿಯುವುದು, ಅಂತಹ ಮನೋಭಾವವನ್ನು ಸಮಕಾಲಿಕವಾಗಿ ರೂಪಿಸಲು ಮತ್ತು ಅದನ್ನು ಬಲಪಡಿಸಲು ಹಲವು ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ಗಾಂಧಿ

ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜನವರಿ 30 ರಂದು ಇಡೀ ರಾಜ್ಯದಲ್ಲಿ ಬೃಹತ್ ಮಾನವ ಸರಪಳಿ ಹಾಗೂ ಸೌಹಾರ್ದ ಸಭೆಯನ್ನು ಒಳಗೊಂಡಂತೆ ಹಲವಾರು ವೈವಿಧ್ಯಮಯ ಕಾರ್ಯಕ್ರಮಗಳು ನಡೆಯುತ್ತಿವೆ. ಅಂದು ಹಾಸನದ ಹೇಮಾವತಿ ಪ್ರತಿಮೆಯ ಮುಂಭಾಗ ಸಂಜೆ 4 ಗಂಟೆಗೆ ಸೌಹಾರ್ದ ಸಭೆ ಮತ್ತು ಮಾನವ ಸರಪಳಿಯನ್ನು ನಡೆಸಲಾಗುವುದು ಎಂದು ಅಂತರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ ಕೆ.ಟಿ.ಶಿವಪ್ರಸಾದ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ದಲಿತ ಸಂಘಟನೆಯ ಸಂಚಾಲಕ ಅಂಬುಗ ಮಲ್ಲೇಶ್, ಪತ್ರಕರ್ತ ವೆಂಕಟೇಶ್, ಟಿಪ್ಪು ಸಂಘರ್ಷ ಸಮಿತಿಯ ಮುಬಷಿರ್ ಅಹಮದ್, ಜಿಲ್ಲಾ ಕ್ರೈಸ್ತ ಸಂಘಗಳ ಮುಖಂಡರಾದ ಸುರೇಶ್ ಪೌಲ್, ಸೌಹಾರ್ದ ವೇದಿಕೆಯ ಜಿಲ್ಲಾ ಸಂಚಾಲಕರಾದ ಪೃಥ್ವಿ ಭಾಗವಹಿಸಿ ಮಾತನಾಡಿದರು.

ಇದನ್ನು ನೋಡಿ : ಕವಿತೆ : ನೊಂದವರ ಧ್ವನಿಯಾಗದ ಮೌನ ಮಹಾಪಾಪ Janashakthi Media

Donate Janashakthi Media

Leave a Reply

Your email address will not be published. Required fields are marked *