ಜೂಜಾಟ ನಡೆಸಿದರೆ ಕೇಸ್ ಬೀಳೋದು ಗ್ಯಾರಂಟಿ: ಮಲ್ಲಿಕಾರ್ಜುನ ಬಾಲದಂಡಿ

ಮಂಡ್ಯ: ನಗರದಲ್ಲಿ ಜೂಜಾಟಕ್ಕೆ ಬ್ರೇಕ್ ಬಿದ್ದಿದ್ದೂ, ಯುಗಾದಿ ಹಬ್ಬದಂದು ಜೂಜಾಟ ನಡೆಸಿದರೆ, ಕೇಸ್ ಬೀಳೋದು ಗ್ಯಾರಂಟಿ ಎಂದು ಮಂಡ್ಯ ಎಸ್ಪಿ‌ ಮಲ್ಲಿಕಾರ್ಜುನ ಬಾಲದಂಡಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಕೇಸ್

ಯುಗಾದಿ ಹಬ್ಬ ಎಂದರೆ ಹೊಸ ವರ್ಷದ ಆರಂಭ ಎನ್ನುವ ನಂಬಿಕೆ ಇರುವ ಜನರಲ್ಲಿ ಸಡಗರ ಮನೆ ಮಾಡುತ್ತದೆ. ಹಬ್ಬದಂದು ಹೊಸ ಬಟ್ಟೆ ತೊಟ್ಟು, ಹಬ್ಬದೂಟ ಸವಿದು, ಪರಸ್ಪರ ಶುಭಾಶಯ ಕೋರುವುದರ ಜೊತೆಗೆ ಜೂಜಾಟ ಆಡುವ ಪದ್ಧತಿ ಕೂಡ ಗತಕಾಲದಿಂಲೂ ನಡೆದುಕೊಂಡು ಬಂದಿದೆ.

ಯುಗಾದಿ ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಹಬ್ಬದ ಆಚರಣೆ ನೆಪದಲ್ಲಿ ಇಸ್ಪೀಟ್ ಆಟ, ಜೌಕಬಾರ ಸೇರಿದಂತೆ ನಾನಾ ಬಗೆಯ ಜೂಜಾಟದ ಕನವರಿಕೆಯಲ್ಲಿದ್ದ ಜನರಿಗೆ ಮಂಡ್ಯ ಜಿಲ್ಲಾ ಪೊಲೀಸರು ಜೂಜಾಟ ನಿರ್ಬಂಧಿಸಿ, ವಾರ್ನಿಂಗ್​ ನೀಡಿದ್ದಾರೆ.

ಇದನ್ನೂ ಓದಿ: ಯು.ಎಸ್ ಸಾಮ್ರಾಜ್ಯದ ಅವನತಿ ತಡೆಯಲು ಟ್ರಂಪ್ ಹೊಸ ಫಾರ್ಮುಲಾ?

ಯುಗಾದಿ ಹಬ್ಬದ ಜೂಜಾಟಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಈ ಸಂಬಂಧ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

ಯುಗಾದಿ ಹಬ್ಬದಂದು ಎಲ್ಲಾ ಮಾದರಿಯ ಜೂಜಾಟಗಳನ್ನು ನಿಷೇಧಿಸಿದ್ದು, ಒಂದು ವೇಳೆ ಪೊಲೀಸರ ಎಚ್ಚರಿಕೆಯನ್ನು ಕಡೆಗಣಿಸಿ ಜೂಜಾಟಕ್ಕೆ ಮುಂದಾದವರು ಹಾಗೂ ಜೂಜು ಅಡ್ಡೆ ನಡೆಸುವವರ ಮೇಲೂ ಗೂಂಡಾ ಕಾಯ್ದೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಯುಗಾದಿ ಹಬ್ಬದ ಸಂದರ್ಭ ಹಾಗೂ ಇತರೇ ದಿನಗಳಲ್ಲಿ ಎಲ್ಲಿಯಾದರೂ ಜೂಜಾಟ ಆಡುವುದನ್ನು ಕಂಡರೂ ಸಾರ್ವಜನಿಕರು ಹತ್ತಿರದ ಪೊಲೀಸ್​ ಠಾಣೆಗೆ ಮಾಹಿತಿ ನೀಡುವಂತೆ ಎಸ್​ಪಿ ಮನವಿ ಮಾಡಿದ್ದಾರೆ.

ಇದನ್ನೂ ನೋಡಿ: ಮಂಗಳೂರು | ಕುಡಿಯಲು ನೀರು ಕೊಡಿ : ಖಾಲಿ ಕೊಡಗಳೊಂದಿಗೆ ಪಾಲಿಕೆಗೆ ಬರ್ತಿವಿ Janashakthi Media

Donate Janashakthi Media

Leave a Reply

Your email address will not be published. Required fields are marked *