ಪಿಎಸ್‌ಐ ಅಕ್ರಮ ನೇಮಕಾತಿ : ಗೃಹ ಸಚಿವರ ಆಪ್ತ ಕಾರ್ಯದರ್ಶಿ ಗಣಪತಿ ಭಟ್‌ ಬಂಧನ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಕೇಸ್​​ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಕಾರ್ಯದರ್ಶಿ ಗಣಪತಿ ಭಟ್ ಅರೆಸ್ಟ್ ಮಾಡಲಾಗಿದೆ. ಸಿಐಡಿ ಅಧಿಕಾರಿಗಳು ಗಣಪತಿ ಭಟ್ ರನ್ನು ಬಂಧಿಸಿದ್ದು, ಸಿಐಡಿ ಕಚೇರಿಗೆ ಕರೆದೊಯ್ಯುತ್ತಿದ್ದಾರೆ.

ಎಡಿಜಿಪಿ ಅಮೃತ್ ಪೌಲ್ ನೀಡಿದ ಹೇಳಿಕೆ ಆಧರಿಸಿ ಗಣಪತಿ ಭಟ್ ರನ್ನು ಅರೆಸ್ಟ್ ಮಾಡಲಾಗಿದೆ. ಪಿಎಸ್‌ಐ ಅಕ್ರಮ ನೇಮಕಾತಿಯಲ್ಲಿ ಗಣಪತಿ ಭಟ್ ಭಾಗಿಯಾಗಿರುವ ಮಾಹಿತಿ ದೊರಕಿದೆ. ಹೋಂ ಮಿನಿಸ್ಟರ್ ಆರಗ ಜ್ಞಾನೇಂದ್ರ ಅವರು ಗಣಪತಿ ಭಟ್ ಪಿಎ ಆಗಿದ್ದಾರೆ. ಗಣಪತಿ ಭಟ್ ಹಲವು ಪಿಎಸ್‌ಐಗಳ ಅಕ್ರಮ ನೇಮಕಾತಿಯಲ್ಲಿ ಭಾಗಿಯಾಗಿದ್ದಾರೆಂದು ವಿಚಾರಣೆಗೊಳಗಾದ ಅಪರಾಧಿಗಳು ಮಾಹಿತಿಯನ್ನು ನೀಡಿದ್ದಾರೆ. ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ.

545 ಪಿ ಎಸ್ ಐ ಹುದ್ದೆ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೆ ಸಿಐಡಿ ಪೊಲೀಸರು ಬಿಜೆಪಿ, ಕಾಂಗ್ರೆಸ್ ಪಕ್ಷದ ಮುಖಂಡರು, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *