ಮಹಾತ್ಮ ಗಾಂಧಿಯವರ ಅಭಿವೃದ್ಧಿ ಮಾದರಿ ಇವತ್ತಿಗೂ ಶ್ರೇಷ್ಠ – ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ರಾಮಗಳ ಉದ್ದಾರ ಮತ್ತು ಅಭಿವೃದ್ಧಿಯೇ ದೇಶದ ನಿಜವಾದ ಅಭಿವೃದ್ಧಿ ಎನ್ನುವ ಸರಳ ಮತ್ತು ವೈಜ್ಞಾನಿಕ ಆರ್ಥಿಕ ನೀತಿಯನ್ನು ನಮಗೆ ಕೊಟ್ಟವರು ಮಹಾತ್ಮ ಗಾಂಧೀಜಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ:ಸಮಾಜವನ್ನು-ದೇಶವನ್ನು ಪ್ರಗತಿಯ ದಿಕ್ಕಿನಲ್ಲಿ ರೂಪಿಸುವವರು ಎಂಜಿನಿಯರ್ ಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ಮಹಾತ್ಮಗಾಂಧಿ ಅವರ 154ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಿಎಂ ಗಾಂಧಿ ಅವರ ಅಭಿವೃದ್ಧಿ ಮಾದರಿ ಇವತ್ತಿಗೂ ಶ್ರೇಷ್ಠವಾದದ್ದು. ಸಮಾಜದ ಕಟ್ಟ ಕಡೆಯ ವ್ಯಕ್ತಿಯೂ ಘನತೆ ಮತ್ತು ಗೌರವದಿಂದ ಬಾಳಬೇಕು ಎನ್ನುವುದು ಅವರ ಗುರಿಯಾಗಿತ್ತು. ಹೀಗಾಗಿ ಸಮಾಜದ ಕಟ್ಟ ಕಡೆಯ ವ್ಯಕ್ತಿಯಂತೆ ಅರೆ ಬೆತ್ತಲೆಯಾಗಿ ಉಡುಪು ಧರಿಸುತ್ತಿದ್ದರು. ನುಡಿದಂತೆ ನಡೆಯುವುದು ಗಾಂಧಿ ಅವರ ಬದುಕಾಗಿತ್ತು ಎಂದು ತಿಳಿಸಿದ್ದಾರೆ.ಶ್ರೇಷ್ಠ 

ಮಹಾತ್ಮಗಾಂಧಿ ಅಪರೂಪದ ಸಂತರಾಗಿದ್ದರು. ಇವರ ಅಹಿಂಸಾ ಮಾರ್ಗದ ಸ್ವಾತಂತ್ರ್ಯ ಚಳವಳಿ ಭಿನ್ನವಾದದ್ದು. ನೆಹರೂ ಅವರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ದಿನ ಗಾಂಧಿಯವರು ದೆಹಲಿಯಲ್ಲಿ ಇರಲಿಲ್ಲ. ಕೋಲ್ಕತ್ತಾದಲ್ಲಿ ದೇಶ ವಿಭಜನೆಯಿಂದಾದ ಅನಾಹುತಗಳಲ್ಲಿ ನೊಂದ ಜನರ ಕಣ್ಣೀರು ಒರೆಸುತ್ತಿದ್ದರು ಎಂದು ಸ್ಮರಿಸಿದ್ದಾರೆ.

ಇದನ್ನೂ ಓದಿ:ಶಿಕ್ಷಕರ ದಿನಾಚರಣೆ ಅಂಗವಾಗಿ 43 ಶಿಕ್ಷಕರಿಗೆ ಸಿಎಂ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ

ರವೀಂದ್ರನಾಥ ಠಾಗೂರರು ಗಾಂಧಿ ಅವರಿಗೆ ಮಹಾತ್ಮ ಎಂದು ಕರೆದರು. ಗಾಂಧಿ ಅವರ ಸತ್ಯದ ಹಾದಿಯ ಬದುಕಿನ ಪ್ರತಿ ಹೆಜ್ಜೆಗಳು, ಅವರ ಸತ್ಯಾನ್ವೇಷಣೆ ಠಾಗೂರರು ಮಹಾತ್ಮ ಎಂದು ಕರೆಯಲು ಕಾರಣವಾಯಿತು ಎಂದು ವಿವರಿಸಿದರು.

ಮಾಜಿ ಪ್ರಧಾನಿ ದಿ.ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಮಹಾತ್ಮ ಗಾಂಧಿಯವರ ಸರಳತೆ ಮತ್ತು ಆದರ್ಶಗಳನ್ನು ಸಂಪೂರ್ಣವಾಗಿ ಮೈಗೂಡಿಸಿಕೊಂಡ ಪ್ರಾಮಾಣಿಕ ನಾಯಕರಾಗಿದ್ದರು. ರೈಲು ಅಪಘಾತದ ಹೊಣೆ ಹೊತ್ತು ರಾಜೀನಾಮೆ ನೀಡಿದ ಆದರ್ಶ ನಾಯಕರಾಗಿದ್ದರು. ಹೀಗಾಗಿ ಗಾಂಧಿ ಮತ್ತು ಶಾಸ್ತ್ರಿ ಇಬ್ಬರೂ ನಮಗೆ ಆದರ್ಶಪ್ರಾಯರು ಎಂದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ವಿಧಾನ ಪರಿಷತ್ ನ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ವಿಡಿಯೋ ನೋಡಿ:ಬಾಪು ಮತ್ತೆ ಮತ್ತೆ ನೀ ನೆನಪಾಗುತ್ತೀದ್ದಿಯಾ – ಕೆ.ಮಹಾಂತೇಶ್‌ರವರ ಕವಿತೆ Janashakthi Media

Donate Janashakthi Media

Leave a Reply

Your email address will not be published. Required fields are marked *