ಗಣಪತಿ ಮೂರ್ತಿ ವಿಸರ್ಜನೆ ವೇಳೆ ಒಂದೇ ಕುಟುಂಬದ ನಾಲ್ವರು ನದಿಯಲ್ಲಿ ಮುಳುಗಿ ಮೃತ

ಗುಜರಾತ್‌: ಗಣಪತಿ ಮೂರ್ತಿ ವಿಸರ್ಜನೆ ವೇಳೆ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ಘಟನೆ  ಗುಜರಾತ್‌ನ ಪಟಾನ್‌ ಜಿಲ್ಲೆಯಲ್ಲಿ ನಡೆದಿದೆ.

ಮಹಿಳೆ ಮತ್ತು ಆಕೆಯ ಇಬ್ಬರು ಗಂಡು ಮಕ್ಕಳು ಹಾಗೂ ಆಕೆಯ ಸಹೋದರ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ : ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ತೀರ್ಪು ಸೆ.13 ಕ್ಕೆ ಮುಂದೂಡಿಕೆ

‘ಬುಧವಾರ ಸಂಜೆ ಗಣಪತಿ ಮೂರ್ತಿ ವಿಸರ್ಜನೆ ವೇಳೆ ಪಟಾನ್‌ ಬಳಿಯ ಸರಸ್ವತಿ ನದಿಯಲ್ಲಿ ಏಳು ಮಂದಿ ಕೊಚ್ಚಿಕೊಂಡು ಹೋಗಿದ್ದಾರೆ. ಇಬ್ಬರು ಪುರುಷರು ಮತ್ತು ಮಹಿಳೆಯನ್ನು ಸ್ಥಳೀಯರು ತಕ್ಷಣ ರಕ್ಷಿಸಿದ್ದಾರೆ. ಆದರೆ, ಒಂದೇ ಕುಟುಂಬದ ನಾಲ್ವರು ಕಾಣೆಯಾಗಿದ್ದರು’ ಎಂದು ಜಿಲ್ಲಾಧಿಕಾರಿ ಅರವಿಂದ ವಿಜಯನ್‌ ತಿಳಿಸಿದ್ದಾರೆ. ತೀವ್ರ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯ ಬಳಿಕ, ಇಂದು (ಗುರುವಾರ) ಮುಂಜಾನೆ ನಾಲ್ವರ ಶವಗಳು ಪತ್ತೆಯಾಗಿವೆ ಎಂದು ಅವರು ಹೇಳಿದ್ದಾರೆ.

ಮೃತರನ್ನು ಶೀತಲ್‌ ಪ್ರಜಾಪತಿ (37) ಆಕೆಯ ಮಕ್ಕಳಾದ ದಕ್ಷ್‌ (17) ಮತ್ತು ಜಿಮಿತ್‌ (15) ಹಾಗೂ ಆಕೆಯ ಸಹೋದರ ನಯನ್‌ ಪ್ರಜಾಪತಿ (30) ಎಂದು ಗುರುತಿಸಲಾಗಿದೆ. ಎಲ್ಲರೂ ಪಟಾನ್‌ ನಗರದ ವೆರೈ ಚಕ್ಲಾ ಪ್ರದೇಶದ ನಿವಾಸಿಗಳು ಎಂದು ವಿಜಯನ್‌ ತಿಳಿಸಿದ್ದಾರೆ.

ಇದನ್ನು ನೋಡಿ : ‘ಕೇಂದ್ರ ಮತ್ತು ರಾಜ್ಯಗಳ ಸಂಬಂಧ’ ಹೇಗಿರಬೇಕು? ಸಂವಿಧಾನ ಸಭೆಯಲ್ಲಿ ಏನೆಲ್ಲಾ ಚರ್ಚೆಯಾಗಿತ್ತು ಜಸ್ಟೀಸ್ .ನಾಗಮೋಹನ್‌

Donate Janashakthi Media

Leave a Reply

Your email address will not be published. Required fields are marked *