ಗೌರವ್‌ ಗುಪ್ತ ವರ್ಗಾವಣೆ – ತುಷಾರ್ ಗಿರಿನಾಥ್ ಬಿಬಿಎಂಪಿ ಮುಖ್ಯ ಆಯುಕ್ತ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್‌ ಗುಪ್ತ ಅವರನ್ನು ವರ್ಗಾವಣೆ ಮಾಡಲಾಗಿದೆ. ಈ ಜಾಗಕ್ಕೆ ತುಷಾರ್‌ ಗಿರಿನಾಥ್‌ ಅವರನ್ನು ನೇಮಕ ಮಾಡಲಾಗಿದೆ.

ಗೌರವ್‌ ಗುಪ್ತರನ್ನು ಮೂಲಸೌಕರ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತರಾಗಿ ತುಷಾರ್‌ ಗಿರಿನಾಥ್‌ ಅವರನ್ನು ನಿಯೋಜಿಸಲಾಗಿದೆ. ಒಟ್ಟು 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಇಂದು(ಮೇ 5) ಸರ್ಕಾರ ಆದೇಶ ಹೊರಡಿಸಿದೆ.

ಅಂತೆಯೇ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆ ಜಿಲ್ಲಾಧಿಕಾರಿಗಳನ್ನು ಸಹ ವರ್ಗಾವಣೆ ಮಾಡಲಾಗಿದೆ. ನಿತೇಶ್‌ ಪಾಟೀಲ್‌ ಅವರನ್ನು ಬೆಳಗಾವಿ ಜಿಲ್ಲಾಧಿಕಾರಿಯಾಗಿ, ಗುರುದತ್‌ ಹೆಗಡೆ ಅವರನ್ನು ಧಾರವಾಡ ಜಿಲ್ಲಾಧಿಕಾರಿ, ಕೆಪಿಎಸ್​ಸಿ ಕಾರ್ಯದರ್ಶಿಯಾಗಿ ಕ್ಯಾ.‌ಡಾ.ರಾಜೇಂದ್ರ, ಕೆಆರ್​ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಎಂ.ಜಿ.ಹಿರೇಮಠ ಅವರನ್ನು ನಿಯೋಜಿಸಲಾಗಿದೆ.

ಕೆಎಸ್​ಆರ್​ಟಿಸಿ ನಿರ್ದೇಶಕರಾಗಿ ಡಾ. ನವೀನ್ ಭಟ್, ಬಾಗಲಕೋಟೆ ಜಿಲ್ಲಾಧಿಕಾರಿ ಭೂ ಬಾಲನ್ ಟಿ., ಇಡಿಸಿಎಸ್ ನಿರ್ದೇಶಕರಾಗಿ ಡಾ.ದಿನೇಶ್ ಸಸಿ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕರಾಗಿ ಭರತ್ ಎಸ್, ಕೆಯುಐಡಿಎಫ್​ಸಿ ವ್ಯವಸ್ಥಾಪಕ ನಿರ್ದೇಶಕರಾಗಿ ಶಿಲ್ಪಾ ಎಂ, ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಪ್ರಸನ್ನ ಹೆಚ್, ಕಲಬುರಗಿ ಜಿ.ಪಂ. ಸಿಇಒ ಆಗಿ ಡಾ.ಗಿರೀಶ್ ದಿಲೀಪ್ ಬಾಡೋಲೆ ಅವರನ್ನು ವರ್ಗಾವಣೆ ಮಾಡಲಾಗಿದೆ.

Donate Janashakthi Media

Leave a Reply

Your email address will not be published. Required fields are marked *