ಗೌರಿ ಹತ್ಯೆ ಪ್ರಕರಣ: ಸಾಕ್ಷಿದಾರರ ಪಟ್ಟಿ ಸಲ್ಲಿಕೆ–ನಾಳೆಯಿಂದ ವಿಚಾರಣೆ ಆರಂಭ

ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷಿದಾರರ ಪಟ್ಟಿಯನ್ನು ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಸಲ್ಲಿಸಿದ್ದಾರೆ.

ಅರ್ಜಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ನ್ಯಾಯಾಲಯ ಜೂನ್ 6ಕ್ಕೆ ವಿಚಾರಣೆ ಮುಂದೂಡಿತ್ತು. ಅದರಂತೆ ನೆನ್ನೆ (ಜೂನ್‌ 04) ಸಾಕ್ಷಿದಾರರ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿಕೆ ಮಾಡಲಾಗಿದೆ. ಜುಲೈ 4 ರಿಂದ 8ರ ವರೆಗೆ ಮತ್ತು ಪ್ರತಿ ತಿಂಗಳು ಒಂದು ವಾರದವರೆಗೆ ವಿಚಾರಣೆ ನಡೆಯಲಿದೆ ಎಂದು ವರದಿಯಾಗಿದೆ.

ಪ್ರತಿಕ್ರಿಯೆಯಾಗಿ ಆರೋಪಿ ಪರ ವಕೀಲರು, ತನಿಖೆಯ ಭಾಗವಾಗಿರುವ ಎಲೆಕ್ಟ್ರಾನಿಕ್ ಸಾಕ್ಷ್ಯಗಳ ಪಟ್ಟಿಗಳ ಬಗೆ ಮನವಿ ಮಾಡಿದರು.

ಗೌರಿ ಲಂಕೇಶ್ ಅವರನ್ನು ಸೆಪ್ಟೆಂಬರ್ 5, 2017 ರಂದು ನಗರದ ರಾಜರಾಜೇಶ್ವರಿ ನಗರದಲ್ಲಿನ ಅವರ ನಿವಾಸದ ಹೊರಗೆ ಹತ್ಯೆ ಮಾಡಲಾಗಿತ್ತು.

ಸೆಪ್ಟಂಬರ್ 5 ರಂದು ಕಚೇರಿಯಿಂದ ಮನೆಗೆ ಬಂದ ಗೌರಿ ಅವರು ಕಾರು ನಿಲ್ಲಿಸಿ ಗೇಟ್ ತೆಗೆದು ಒಳಗಡೆ ಹೊರಟ್ಟಿದ್ದರು. ಈ ವೇಳೆ ಗೌರಿ ತಲೆಗೆ ಹಿಂಬದಿಯಿಂದ ಫೈರ್ ಮಾಡಲು ಹಂತಕ ರೆಡಿಯಾಗಿದ್ದನು. ಹಿಂದೆ ಯಾರೋ ಬಂದಿದ್ದಾರೆಂದು ಗೊತ್ತಾದ ಕೂಡಲೇ ಗೌರಿ ಹಿಂದಿರುಗಿ ಹಂತಕನನ್ನು ನೋಡಿದ್ದಾರೆ. ಕೂಡಲೇ ಯಾರು? ಯಾರು ನೀನು? ಅಂತ ಗೌರಿ ಲಂಕೇಶ್‌ ಪ್ರಶ್ನೆ ಮಾಡಿದ್ದಾರೆ. ಪ್ರಶ್ನೆಗೆ ತಬ್ಬಿಬ್ಬಾದ ಹಂತಕ ತಕ್ಷಣ ಕೈಯಲ್ಲಿದ್ದ ರಿವಾಲ್ವರ್ ಮೂಲಕ ತಲೆಗೆ ಗುಂಡು ಹೊಡೆಯಲು ಫೈರ್ ಮಾಡಿದ್ದ, ಆದ್ರೆ ಅದು ಗುರಿ ತಪ್ಪಿ ಗೋಡೆಗೆ ಸಿಡಿದಿತ್ತು.

ಗೌರಿ ಲಂಕೇಶ್‌ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗೊತ್ತಾದಾಗ ಹಂತಕ, ಕ್ಷಣಾರ್ಧದಲ್ಲಿ ತನ್ನ ಗುರಿಯನ್ನು ಬದಲಿಸಿ, ಹೊಟ್ಟೆ ಮತ್ತು ಎದೆಯ ಭಾಗಕ್ಕೆ ನಾಲ್ಕು ಗುಂಡು ಹೊಡೆದಿದ್ದಾನೆ. ಕೊನೆಯ ಗುಂಡು ಮತ್ತೆ ಗುರಿ ತಪ್ಪಿತ್ತು. ಅಷ್ಟರಲ್ಲಿ ಗೌರಿ ಲಂಕೇಶ್‌ ನಿಧನ ಹೊಂದಿದ್ದರು. ಹಂತಕ ಸಿಡಿಸಿದ ಮೂರನೇ ಗುಂಡು ನೇರವಾಗಿ ಎದೆಗೆ ನುಗ್ಗಿ ಹೃದಯವನ್ನೇ ಹೊಕ್ಕಿತ್ತು.

Donate Janashakthi Media

Leave a Reply

Your email address will not be published. Required fields are marked *