ಹೈದರಾಬಾದ್: ತಮ್ಮ ಪೋಷಕರನ್ನು ಸರ್ಕಾರಿ ನೌಕರರು ನಿರ್ಲಕ್ಷಿಸಿದರೆ, ಅವರ ಸಂಬಳದ 10 ರಿಂದ 15 ಪ್ರತಿಶತವನ್ನು ಕಡಿತಗೊಳಿಸಿ ನಿರ್ಲಕ್ಷ್ಯಕ್ಕೊಳಗಾದ ಪೋಷಕರಿಗೆ ನೀಡುವ ಶಾಸನವನ್ನು ತೆಲಂಗಾಣ ಜಾರಿಗೆ ತರಲಿದೆ ಎಂದು ಅಕ್ಟೋಬರ್ 18ರಂದು ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಹೇಳಿದ್ದಾರೆ.
ಹೊಸದಾಗಿ ಆಯ್ಕೆಯಾದ ಗ್ರೂಪ್-II ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು ಹಸ್ತಾಂತರಿಸುವ ಮೊದಲು ಸಭೆಯನ್ನುದ್ದೇಶಿಸಿ ಮಾತನಾಡಿದ ರೆಡ್ಡಿ, ಸಮಸ್ಯೆಗಳೊಂದಿಗೆ ಅಧಿಕಾರಿಗಳನ್ನು ಸಂಪರ್ಕಿಸುವ ಜನರ ಬಗ್ಗೆ ಸಹಾನುಭೂತಿಯಿಂದ ವರ್ತಿಸುವಂತೆ ಒತ್ತಾಯಿಸಿದರು.
ಇದನ್ನೂ ಓದಿ: ನವದೆಹಲಿ | ಮತದಾರರಿಗೆ ಆಮಿಷ ತಡೆಗೆ ಆಯೋಗ ಸೂಚನೆ
“ನಾವು ಒಂದು ಕಾನೂನನ್ನು ತರುತ್ತಿದ್ದೇವೆ. ಸರ್ಕಾರಿ ನೌಕರರು ತಮ್ಮ ಪೋಷಕರನ್ನು ನಿರ್ಲಕ್ಷಿಸಿದರೆ, ಸಂಬಳದ 10 ರಿಂದ 15 ಪ್ರತಿಶತವನ್ನು ಕಡಿತಗೊಳಿಸಿ ಪೋಷಕರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಶಾಸನದ ಕರಡು ಪ್ರತಿಯನ್ನು ರಚಿಸುವವರು ನೀವೇ. ನೀವು ಮಾಸಿಕ ಸಂಬಳವನ್ನು ಪಡೆಯುವಂತೆಯೇ, ನಿಮ್ಮ ಪೋಷಕರು ಸಹ ಅದರಿಂದ ಮಾಸಿಕ ಆದಾಯವನ್ನು ಪಡೆಯುವುದನ್ನು ನಾವು ಖಚಿತಪಡಿಸಿಕೊಳ್ಳುತ್ತೇವೆ” ಎಂದು ರೆಡ್ಡಿ ಹೇಳಿದ್ದಾರೆ.
ಶಾಸನವನ್ನು ರೂಪಿಸಲು ಅಧಿಕಾರಿಗಳ ಸಮಿತಿಯನ್ನು ರಚಿಸುವಂತೆ ರೇವಂತ್ ರೆಡ್ಡಿ ಮುಖ್ಯ ಕಾರ್ಯದರ್ಶಿ ರಾಮಕೃಷ್ಣ ರಾವ್ ಅವರಿಗೆ ಸೂಚಿಸಿದ್ದಾರೆ.
ಇದನ್ನೂ ನೋಡಿ: ಗುಜರಾತ್ | ವರ್ಚಸ್ಸಿನ ಭೀತಿ ಬಿಜೆಪಿ – ಸಚಿವ ಸಂಪುಟಕ್ಕೆ ಫುಲ್ ಸರ್ಜರಿ Janashakthi Media
