ಬೆಂಗಳೂರು: ಜೂನ್ 4 ಬುಧವಾರದಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಆರ್ಸಿಬಿ ಅಭಿಮಾನಿಗಳು ಮೃತಪಟ್ಟ ಬೆನ್ನಲ್ಲೇ ಸರ್ಕಾರ ಈಗಾಗಲೇ ಹಲವು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದೆ. ಇದೀಗ ಸಿಎಂ ಸಿದ್ಧರಾಮಯ್ಯ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ರನ್ನು ಹುದ್ದೆಯಿಂದ ತೆಗೆದು ಹಾಕಲಾಗಿದೆ.
ಈ ಬಗ್ಗೆ ನಿನ್ನೆಯ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಕೆಂಡಾಮಂಡಲವಾಗಿದ್ದರು.
ಇದನ್ನೂ ಓದಿ: ಪತ್ರಗಳ ಮೂಲಕ ಪ್ರೇಮಲೋಕ ಸೃಷ್ಟಿಸಿದ “ಲವ್ ಲೆಟರ್ಸ್ ! ನಿನ್ನ ಪ್ರೀತಿಯ ನಾನು”
ತರಾತುರಿಯಲ್ಲಿ ಆರ್ ಸಿ ಬಿ ಸಂಭ್ರಮಾಚರಣೆ ಮಾಡಿದ್ದಕ್ಕೆ ಅಧಿಕಾರಿಗಳು, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೇಲೂ ಸಿಟ್ಟಾಗಿದ್ದರು. ಸಭೆಯಲ್ಲಿ ಸಚಿವರು ಗೋವಿಂದ ರಾಜು ಅವರ ಮೇಲೆ ಆರೋಪ ಮಾಡಿದ್ದರು.
ಗೋವಿಂದರಾಜು ಅವರೇ ತಾರಾತುರಿಯಲ್ಲಿ ಸಂಭ್ರಮಾಚರಣೆ ನಡೆಸಲು ಅನುಮತಿ ಕೋರಿದ್ದಾರೆ ಎಂಬ ಆರೋಪ ನಿನ್ನೆ ಕೇಳಿ ಬಂದಿತ್ತು. ಇದೀಗ ಅವರನ್ನು ಸ್ಥಾನದಿಂದ ಕೆಳಗಿಳಿಸಲಾಗಿದೆ.
ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಮೂಲಕ ಕಾರ್ಯಕ್ರಮ ಆಯೋಜನೆ ಪ್ರಕರಣದಿಂದ ತೀವ್ರ ಮುಜುಗರಕ್ಕೊಳಗಾಗಿರುವ ಸರ್ಕಾರ, ಗೋವಿಂದರಾಜು ಒತ್ತಡದಿಂದಲೇ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ ಎಂದು ಗೋವಿಂದರಾಜು ವಿರುದ್ದ ಸಿಎಂ ಆಪ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ಸಿಎಂ ಸಿದ್ದರಾಮಯ್ಯ ಅವರು ತೆರವುಗೊಳಿಸಿ ಆದೇಶಿಸಿದ್ದಾರೆ.
ಇದನ್ನೂ ನೋಡಿ: ಚರ್ಚೆ | ತ್ಯಾಗದ ಹಬ್ಬ ಬಕ್ರೀದ್- ಆಹಾರ ರಾಜಕಾರಣ – ಸೈಯದ್ ಶಫಿವುಲ್ಲಾ ಮತ್ತು ಕೆ ಎಸ್ ವಿಮಲಾ ಮಾತುಕತೆJanashakthi