ಮನರೇಗಾದಡಿ ಕೆಲಸ ಸಿಗದ ಹಿನ್ನೆಲೆ ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ

ಬಾಗಲಕೋಟೆ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಹುನಗುಂದ ತಾಲೂಕಿನ ಐಹೊಳೆ ಗ್ರಾಮದ ಕೂಲಿ ಕಾರ್ಮಿಕರು ಪಂಚಾಯತಿ ಕಛೇರಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದ್ದಾರೆ.

ಗ್ರಾಮ ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುವ  ಕಂಪ್ಯೂಟರ್ ಕಾರ್ಯನಿರ್ವಾಹಕ ಎಚ್.ಎನ್‌. ಮಠ ತನ್ನ ಕೆಲಸವನ್ನು ನಿಷ್ಠೆಯಿಂದ ಮಾಡದೇ, ಕೆಲವರಿಗೆ ಮಾತ್ರ ಎನ್.ಎಮ್.ಆರ್. ತೆಗೆದು ಉದ್ಯೋಗಕ್ಕೆ ಸಂಬಂಧಿಸಿದ ದಾಖಲಾತಿಗಳನ್ನು ನೀಡುತ್ತಿದ್ದಾನೆ.  ಹೀಗಾಗಿ ಸುಮಾರು ಐನೂರಕ್ಕೂ ಹೆಚ್ಚು ಕಾರ್ಮಿಕರು ಉದ್ಯೋಗದಿಂದ ವಂಚಿತರಾಗಿದುದ, ಕಾರ್ಮಿಕರು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ರೈತನ ವಿರುದ್ಧ ಅಕ್ರಮ ಜಾನುವಾರು ಸಾಗಾಣಿಕೆ ಕೇಸು

ಕೂಡಲೇ ಕಂಪ್ಯೂಟರ್ ಕಾರ್ಯನಿರ್ವಹಕನನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿರುವ ಪ್ರತಿಭಟನಾಕಾರರು ಕೆಲಸ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ಮಧ್ಯೆ ವಾಗ್ವಾದ ನಡೆದಿದೆ.

Donate Janashakthi Media

Leave a Reply

Your email address will not be published. Required fields are marked *