6 ವರ್ಷದಿಂದ ಸಂಬಳವೇ ಇಲ್ಲ: ತಾ.ಪಂ. ಕಚೇರಿಯಲ್ಲಿ ಗುತ್ತಿಗೆ ನೌಕರ ನೇಣಿಗೆ ಶರಣು

ಮುಧೋಳ : ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಗುತ್ತಿಗೆ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದ ಬಸಣ್ಣ ಪಟ್ಟೇದ(42) ಎಂಬವರು ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಆತ್ಮಹತ್ಯೆ ಶರನಾಗಿದ್ದಾನೆ. ರಾಯಚೂರು ಜಿಲ್ಲೆ ಲಿಂಗಸ್ಗೂರು ತಾಲೂಕಿನ ಚಿಕ್ಕ ಹೆಸರೂರ ಗ್ರಾಮದವರು ಎಂದು ಗುರುತಿಸಲಾಗಿದೆ.

ಕಳೆದ 10 ವರ್ಷದಿಂದ ಗುತ್ತಿಗೆ ಆಧಾರದಲ್ಲಿ ಸೇವೆ ಸಲ್ಲಿಸುತ್ತಿದ್ದ ಬಸಣ್ಣ ಪಟ್ಟೇ 6‌ ವರ್ಷದಿಂದ ವೇತನ ಸಿಗದಿರುವುದರಿಂದ ತೀವ್ರವಾಗಿ ಮನನೊಂದಿದರು ಎನ್ನಲಾಗಿದೆ. ಆರ್ಥಿಕ ಸಂಕಷ್ಟದಿಂದ ಬಳಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪತ್ನಿ ಕವಿತಾ ಆರೋಪಿಸಿದ್ದಾರೆ.

ಸೋಮವಾರ(ಜೂನ್‌ 27) ರಾತ್ರಿ ತಾಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದು, ಮುಧೋಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *