ಹಾವೇರಿ: ದೇವಗಿರಿ ಗ್ರಾಮದಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ 19 ವಿದ್ಯಾರ್ಥಿನಿಯರು ಖಾಸಗಿ ಪಿ.ಜಿ.ಸೆಂಟರ್ ನ ಕಲುಷಿತ ಆಹಾರ ಸೇವನೆಯಿಂದ ತೀವ್ರ ಅಸ್ವಸ್ಥಗೊಂಡು ವೀರಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿಗಳನ್ನು ಎಸ್ಎಫ್ಐ ನಿಯೋಗ ಭೇಟಿ ನೀಡಿ ಆರೋಗ್ಯ ವಿಚಾರಿಸಿ, ಮಾಹಿತಿ ಪಡೆದುಕೊಂಡು, ವೈದ್ಯರ ಹಾಗೂ ಪೋಷಕರ ಜೊತೆಗೆ ಚರ್ಚಿಸಿದರು.
ಶನಿವಾರ ರಂದು ಊಟ ಸೇವನೆ ಮಾಡಿದ ವಿದ್ಯಾರ್ಥಿಗಳು ಆರೋಗ್ಯದಲ್ಲಿ ಏರುಪೇರು ತೀವ್ರಗೊಂಡ ನಂತರ ಒಬ್ಬೊಬ್ಬರಾಗಿ ಆಟೋದಲ್ಲಿ ಹೋಗಿ ವೀರಾಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಈ ವರೆಗೂ ಯಾವುದೇ ಜನಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಆಹಾರ ಇಲಾಖೆಯ ಅಧಿಕಾರಿಗಳು, ಸಂಬಂಧಿತ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಣೆ ಮಾಡದ ನಿರ್ಲಕ್ಷ್ಯವನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್ಎಫ್ಐ) ಹಾವೇರಿ ಜಿಲ್ಲಾ ಸಮಿತಿಯು ತೀವ್ರವಾಗಿ ಖಂಡಿಸುತ್ತದೆ.
ಇದನ್ನೂ ಓದಿ : ಬಿಸಿಯೂಟದಲ್ಲಿ ಹುಳುಗಳು ಪತ್ತೆ ಪ್ರಕರಣ: ಮುಖ್ಯ ಶಿಕ್ಷಕ ಅಮಾನತು
ಕಲುಷಿತ ಆಹಾರದಿಂದ ವಿದ್ಯಾರ್ಥಿನಿಯರು ತೀವ್ರ ಅಸ್ವಸ್ಥಗೊಂಡಿದ್ದಾರೆ ಅವರಿಗೆ ಸೂಕ್ತ ಚಿಕಿತ್ಸೆ ಮುಂದುವರೆಯಬೇಕು. 19 ವಿದ್ಯಾರ್ಥಿನಿಯರು ಪೈಕಿ 3-4 ವಿದ್ಯಾರ್ಥಿನಿಯರಿಗೆ ಅತ್ಯಂತ ಆರೋಗ್ಯದ ಸಮಸ್ಯೆ ಇದೆ ಅವರಿಗೆ ಉನ್ನತ ಚಿಕಿತ್ಸೆ ಒದಗಿಸಬೇಕು. ಒಟ್ಟಾರೆ ಘಟನೆಯ ಕುರಿತು ಸ್ವಯಂ ದೂರ ದಾಖಲು ಮಾಡಿಕೊಂಡು ಸಮಗ್ರ ತನಿಖೆ ನಡೆಸಬೇಕು.
ದೂರದ ಜಿಲ್ಲೆಯಿಂದ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಜಿಲ್ಲೆಗೆ ಬಂದ ವಿದ್ಯಾರ್ಥಿಗಳಿಗೆ ಪೂರಕ ವಾತಾವರಣ ಕಲ್ಪಿಸಿಕೊಡುವುದು ಸರ್ಕಾರದ ಕರ್ತವ್ಯವಾಗಿದೆ ಆದರೆ ಸರ್ಕಾರಕ್ಕೆ ಅನೇಕ ಬಾರಿ ಹೋರಾಟ ಮಾಡಿ ಮನವಿ ಪತ್ರ ಕೊಟ್ಟರು ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಿಕೊಡುವಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ವಿಫಲವಾಗಿವೆ. ಸರ್ಕಾರಿ ಹಾಸ್ಟೆಲ್ ಸೌಲಭ್ಯ ಸಿಗದೆ ಇರುವ ವಿದ್ಯಾರ್ಥಿಗಳು ಖಾಸಗಿ ವಸತಿ ನಿಲಯಗಳು ಹಾಗೂ ಬಾಡಿಗೆ ರೂಮ್ ಗಳ ಮೇಲೆ ಅವಲಂಬನೆ ಆಗಿದ್ದಾರೆ.
ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಬಾಡಿಗೆ ಬಿಲ್ಡಿಂಗ್ ನಲ್ಲಿ ನಡೆಯುತ್ತಿದ ವಸತಿ ನಿಲಯಕ್ಕೆ ಅಡ್ವಾನ್ಸ್ 5.000 ರೂ ಕಟ್ಟಿಸಿಕೊಂಡು ಪ್ರತಿ ತಿಂಗಳು 2.500 ರೂ ಮೆಸ್ ಬಿಲ್ ಪಾವತಿ ಮಾಡಿಸಿಕೊಂಡು ಬರುವ ಪದ್ಧತಿ ನಡೆಯುತ್ತಿದೆ. ಇದು ಬಡ ವಿದ್ಯಾರ್ಥಿಗಳಿಗೆ ಭಾರಿ ಹೊರೆಯಾಗುತ್ತಿದ್ದು ಹಣ ಸುಲಿಯುವ ಹುನ್ನಾರಕ್ಕೆ ಕಡಿವಾಣ ಹಾಕಿ. ಕಾಲೇಜಿನ ಹಿಂದುಗಡೆ ಅನೇಕ ಕೊಠಡಿಗಳು ಖಾಲಿ ಬಿದ್ದುರು ಖಾಸಗಿ ಪಿ.ಜಿ.ಸೆಂಟರ್ ಗಳಿಗೆ ಯಾಕೆ? ಲಕ್ಷಾಂತರ ರೂಪಾಯಿ ಬಾಡಿಗೆ ಕೊಡಬೇಕು? ಯಾರ? ಜೇಬು ತುಂಬಿಸಲು ಖಾಸಗಿ ಬಿಲ್ಡಿಂಗ್ ನಲ್ಲಿ ವಿದ್ಯಾರ್ಥಿನಿಯರನ್ನು ಇರಿಸಲಾಗಿತ್ತು? ಇದರ ಸಮಗ್ರ ತನಿಖೆ ನಡೆಯಬೇಕು.
ಕೂಡಲೇ ಕಾಲೇಜಿನ ಹಿಂದುಗಡೆ ಇರುವ ಬೃಹತ್ ಕಟ್ಟಡಗಳಲ್ಲಿಯೇ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಾ ಸಂಖ್ಯಾತರ ಕಲ್ಯಾಣ ಇಲಾಖೆಯ ಹಾಸ್ಟೆಲ್ ಗಳನ್ನು ತೆರೆಯಬೇಕು. ಅರ್ಜಿ ಹಾಕಿದ ಎಲ್ಲಾ ವಿದ್ಯಾರ್ಥಿಗಳಿಗೂ ಹಾಸ್ಟೆಲ್ ಸೌಲಭ್ಯ ಒದಗಿಸಬೇಕು. ಬಸ್ಸಿನ ಅನಾನುಕೂಲ ಹೆಚ್ಚಾಗಿದ್ದು ಕೂಡಲೇ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿಯಾಗಿ ಕನಿಷ್ಟ 20 ಬಸ್ ಗಳನ್ನು ಬಿಡಬೇಕು. ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ ಘಟನೆಯಿಂದ ಎಚ್ಚೆತುಕೊಂಡು ನಿಯಮಗಳನ್ನು ಗಾಳಿಗೆ ತೂರಿದ ಅನಧಿಕೃತ ಖಾಸಗಿ ಪಿ.ಜಿ.ಸೆಂಟರ್ ಗಳನ್ನು ಪರಿಶೀಲನೆ ನಡೆಸಬೇಕು. ಶಿಸ್ತು ಕ್ರಮ ಜರುಗಿಸಬೇಕು ಆಗ್ರಹಿಸಿದರು.
ಎಸ್ಎಫ್ಐ ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಬಸವರಾಜ ಎಸ್, ಹಾಸ್ಟೆಲ್ ವಿದ್ಯಾರ್ಥಿಗಳ ಉಪಸಮಿತಿ ರಾಜ್ಯ ಸಂಚಾಲಕ ಅರುಣ್ ನಾಗವತ್, ಕಾಲೇಜ್ ಘಟಕ ಅಧ್ಯಕ್ಷೆ ಚೈತ್ರಾ ಕೊರವರ, ಮುಖಂಡರಾದ ಸಿದ್ದು ಹೆಚ್, ದಯನಾಂದ ಎಸ್ ಕೆ ಉಪಸ್ಥಿತರಿದ್ದರು.
ಇದನ್ನೂ ನೋಡಿ : ಹಿಜಾಬ್ ಗೆ ಕೈ ಹಾಕಿನಿತೀಶ್ ಕುಮಾರ್ ಮಾಡಿದ ಎಡವಟ್ಟು, ಕ್ಷಮಾಯಾಚನೆಗೆ ಪಟ್ಟು Janashakthi Media
