ನನ್ನ ಸುತ್ತಮುತ್ತಲಿನ 40 ಜನರ ಫೋನ್ ಟ್ಯಾಪ್ ಆಗುತ್ತಿದೆ ಎಂದ ಹೆಚ್‌.ಡಿ.ಕುಮಾರಸ್ವಾಮಿ

ಬೆಂಗಳೂರು: ನನ್ನ ಸುತ್ತಮುತ್ತಲಿನ 40 ಜನರ ಫೋನ್ʼ ಟ್ಯಾಪ್‌ ಆಗುತ್ತಿದ್ದು, ಇದನ್ನು ರಾಜ್ಯ ಸರ್ಕಾರವೇ ಮಾಡುತ್ತಿದೆ ಎಂದು ಮಾಜಿ ಸಿಎಂ ಜೆಡಿಎಸ್‌ ರಾಜ್ಯಾ‍ಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ರೇವಣ್ಣ ಅವರ ಫೋನ್ ಸೇರಿದಂತೆ ನನ್ನ ಸುತ್ತಮುತ್ತ ಇರುವ ಎಲ್ಲರ ಫೋನ್ ಗಳನ್ನೂ ಸರ್ಕಾರ ಟ್ಯಾಪ್ ಮಾಡಿಸುತ್ತಿದೆ. ನನ್ನ ಫೋನ್ ಕೂಡ ಟ್ಯಾಪ್ ಆಗುತ್ತಿದೆ.ರಾಜಕೀಯವಾಗಿ ನಮ್ಮ ಕುಟುಂಬವನ್ನು ಮುಗಿಸಲೇಬೇಕು ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅದು ಆಡಿಯೋ ಟೇಪುಗಳಲ್ಲಿಯೇ ಬಯಲಾಗಿದೆ.

ಇದನ್ನೂ ಓದಿ: ಸರಕಾರ ವರ್ಷಾಚರಣೆಯಲ್ಲಿ ಸಂಭ್ರಮಿಸುತ್ತಿದೆ!; ರೈತರ ಬರ ಪರಿಹಾರ ಹಣ ಬ್ಯಾಂಕ್ ಸಾಲಕ್ಕೆ ಜಮೆ ಆಗುತ್ತಿದೆ! ಹೆಚ್.ಡಿ.ಕೆ ಕಿಡಿ

ಹೀಗಾಗಿ ನಮ್ಮ ಕುಟುಂಬದ ಎಲ್ಲರ ಮೊಬೈಲ್ ಫೋನ್ ಗಳನ್ನು ಸರಕಾರ ಕದ್ದಾಲಿಕೆ ಮಾಡಿಸುತ್ತಿದೆ. ಯಾರನ್ನೂ ಇವರು ಬಿಟ್ಟಿಲ್ಲ, ಎಲ್ಲರ ಫೋನ್ ಟ್ಯಾಪ್ ಮಾಡುತ್ತಿದ್ದಾರೆ.ಫೋನ್ ಟ್ಯಾಪ್ ಮಾಡುವಂಥ ಮುಟ್ಟಾಳ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತಿಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿರುವುದು ಭೂತದ ಬಾಯಿಯಲ್ಲಿ ಭಗವದ್ಗೀತೆ ನುಡಿದಂತೆ ಎಂದು ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ನಾಶ ಮಾಡುವುದಕ್ಕೆ ಈ ಸರ್ಕಾರದಲ್ಲಿರುವ ʼಸೀಡಿ ಶಿವುʼ ಸಂಚು ರೂಪಿಸಿರುವುದು ದೃಢಪಟ್ಟಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ಇದನ್ನೂ ನೋಡಿ: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಮೇ 30ರಂದು ಹಾಸನದಲ್ಲಿ ಬೃಹತ್‌ ಹೋರಾಟಕ್ಕೆ ನಿರ್ಧಾರ

Donate Janashakthi Media

Leave a Reply

Your email address will not be published. Required fields are marked *