ಎಚ್​ಡಿಎಫ್​ಸಿ ಬ್ಯಾಂಕ್​ ಉದ್ಯೋಗಿ ಕೆಲಸದ ಒತ್ತಡ ತಾಳದೇ ಮೃತ

ಪುಣೆ: ಕಳೆದ ಹತ್ತು ದಿನಗಳಲ್ಲಿ ಕೆಲಸದ ಒತ್ತಡ ಸಹಿಸದೇ ಮೂರನೆಯ ಸಾವು ಸಂಭವಿಸಿದೆ. ಇವೈ ಕಂಪೆನಿಯ ಯುವತಿ ಹಾಗೂ ಎಚ್​ಡಿಎಫ್​ಸಿ ಬ್ಯಾಂಕ್​ ಉದ್ಯೋಗಿ ಕೆಲಸದ ಒತ್ತಡ ತಾಳದೇ ಮೃತಪಟ್ಟಿದ್ದರೆ, ಈಗ ಉತ್ತರ ಪ್ರದೇಶದ ಝಾನ್ಸಿಯ ತರುಣ್ ಸಕ್ಸೇನಾ ಎನ್ನುವವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಬ್ಯಾಂಕ್

42 ವರ್ಷದ ತರುಣ್ಬಜಾಜ್ ಫೈನಾನ್ಸ್‌ನಲ್ಲಿ ಏರಿಯಾ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು​. ಅತ್ಯುತ್ತಮ ಪ್ರಯತ್ನ ಮಾಡಿದರೂ ಟಾರ್ಗೆಟ್​ ರೀಚ್​ ಆಗಲು ಸಾಧ್ಯವಾಗದ ಕಾರಣ ಅಪಾರ ಒತ್ತಡಕ್ಕೆ ಒಳಗಾಗಿರುವುದಾಗಿ ಹೇಳಿ ಡೆತ್​ನೋಟ್​ ಬರೆದಿಟ್ಟು ಸಾವಿಗೆ ಶರಣಾಗಿದ್ದಾರೆ. ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಬೇರೆ ಕೊಠಡಿಯಲ್ಲಿ ಇರಿಸಿ ತಾವು ಇನ್ನೊಂದು ಕೊಠಡಿಗೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಬಾಗಿಲ ಬಳಿ ನಿಲ್ಲಬೇಡ ಎಂದಿದ್ದಕ್ಕೆ ಬಸ್‌ನ ಕಂಡಕ್ಟರ್‌ಗೆ ಚಾಕುವಿನಿಂದ ಇರಿದ ಪ್ರಯಾಣಿಕ

ಐದು ಪುಟಗಳ ಡೆತ್​ನೋಟ್​ನಲ್ಲಿ  ತಮ್ಮ ಸಾವಿನ ಕಾರಣವನ್ನು ತರುಣ್​ ಬರೆದಿಟ್ಟಿದ್ದು, ಇದರಲ್ಲಿ ಅಧಿಕಾರಿಗಳ ಬಗ್ಗೆಯೂ ವಿವರಿಸಿದ್ದಾರೆ.  ಕಳೆದ ಎರಡು ತಿಂಗಳಿಂದ  ಟಾರ್ಗೆಟ್​ ಪೂರೈಸುವಂತೆ ಮೇಲಧಿಕಾರಿಗಳು ಒತ್ತಡ ಹೇರುತ್ತಿದ್ದಾರೆ. ಇಲ್ಲದಿದ್ರೆ ಸಂಬಳ ಕಟ್​ ಮಾಡೋದಾಗಿ ಬೆದರಿಕೆ ಹಾಕಿದ್ದಾರೆ. ಆದರೆ ಏನು ಮಾಡಿದರೂ ನನಗೆ ಟಾರ್ಗೆಟ್​ ರೀಚ್​ ಆಗಲು ಸಾಧ್ಯವಾಗುತ್ತಿಲ್ಲ.

ನನ್ನ ಸಾವಿಗೆ ಕಂಪೆನಿಯ ಇಬ್ಬರು ಅಧಿಕಾರಿಗಳನ್ನು ಹೊಣೆಗಾರರು ಎಂದು ಅದರಲ್ಲಿ ಅವರು ಉಲ್ಲೇಖಿಸುರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇವರು ಬಜಾಜ್ ಫೈನಾನ್ಸ್ ಸಾಲಗಳ ಇಎಂಐ  ಸಂಗ್ರಹಿಸುವ ಕಾರ್ಯವನ್ನು ನಿರ್ವಹಿಸುತ್ತಿದ್ದರು.

ಆದರೆ ಹಲವಾರು ಸಮಸ್ಯೆಗಳಿಂದಾಗಿ ಟಾರ್ಗೆಟ್​ ರೀಚ್​ ಆಗಲು ಸಾಧ್ಯವಾಗುತ್ತಿರಲಿಲ್ಲ. ಇದರಿಂದ ವರುಣ್​ ತನ್ನ ಕೆಲಸವನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದರಂತೆ. ಈ ಹಿನ್ನಲೆ ಹಿರಿಯ ಅಧಿಕಾರಿಗಳು ಪದೇ ಪದೇ ಅವಮಾನ ಮಾಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ನೋಡಿ: ಸೌಹಾರ್ದ ಕೆಡಿಸುತ್ತಿರುವುದೇ ಸರ್ಕಾರಗಳು: ಕವಿ ಮೂಡ್ನಾಕೂಡು ಚಿನ್ನಸ್ವಾಮಿJanashakthi Media

Donate Janashakthi Media

Leave a Reply

Your email address will not be published. Required fields are marked *