ಏ.2 ರಂದು ನಟ ದರ್ಶನ್‌ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ – ಸುಪ್ರೀಂಕೋರ್ಟ್

ನವದೆಹಲಿ:ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಏ.2 ರಂದು ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ:-ಜನಸಂಖ್ಯಾ ಹೆಚ್ಚಳವೂ ಪಿತೃಪ್ರಧಾನ ಮೌಲ್ಯಗಳೂ

ಬೆಂಗಳೂರು ಪೊಲೀಸರು ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಇಂದು ವಿಚಾರಣೆಗೆ ಬರಬೇಕಿತ್ತು. ವಿಚಾರಣೆಗೆ ಪಟ್ಟಿಯಾಗದ ಹಿನ್ನಲೆ ದರ್ಶನ್ ಪ್ರಕರಣದಲ್ಲಿನ ರಾಜ್ಯದ ವಿಶೇಷ ವಕೀಲ ಅನಿಲ್ ನಿಶಾನಿ ಅರ್ಜಿ ವಿಚಾರಣೆ ನಡೆಸುವಂತೆ ಪ್ರಸ್ತಾಪಿಸಿದರು. ಇದಕ್ಕೆ ಕೋರ್ಟ್ ಏ 2 ರಂದು ವಿಚಾರಣೆ ನಡೆಸಲಾಗುವುದು ಎಂದು ಹೇಳಿತು.

ಇದನ್ನೂ ಓದಿ:-ಹಾಸನ ವಿವಿ ಉಳಿಸೋಣ – ಸಂಸದ ಶ್ರೇಯಸ್. ಎಂ. ಪಟೇಲ್

ಕಳೆದ ವಿಚಾರಣೆಯಲ್ಲಿ ಅರ್ಜಿ ವಿಚಾರಣೆಗೆ ಒಪ್ಪಿಕೊಂಡಿದ್ದ ಸುಪ್ರೀಂಕೋರ್ಟ್ ನಟ ದರ್ಶನ್ ಸೇರಿದಂತೆ ಇತರೆ ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿತ್ತು. ಇನ್ನೂ ಸುಪ್ರೀಂ ಕೋರ್ಟ್​ನಲ್ಲಿ ವಾದಕ್ಕೆ ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ನೇಮಿಸಿಕೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಈ ಬಗ್ಗೆ ಯಾವುದೇ ಬೆಳವಣಿಗೆ ಸದ್ಯಕ್ಕೆ ಕಂಡು ಬಂದಿಲ್ಲ.

 

Donate Janashakthi Media

Leave a Reply

Your email address will not be published. Required fields are marked *