ರಾಜ್ಯಾದ್ಯಂತ ಭಾರೀ ಮಳೆ; ಐದು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

ಬೆಂಗಳೂರು: ಸಾಕಷ್ಟು ಅನಾಹುತಗಳು ರಾಜ್ಯಾದ್ಯಂತ ಭಾರೀ ಮಳೆಯಿಂದ ಸೃಷ್ಟಿಯಾಗುತ್ತಿದೆ. ಗುಡ್ಡಗಳು ಸತತ ಗಾಳಿ ಮಳೆಯಿಂದಾಗಿ ಕುಸಿದು ಹಲವೆಡೆ ರಸ್ತೆ ಸಂಪರ್ಕ ಸಹ ಕಡಿತಗೊಂಡಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡು ಮನೆಯೊಳಗೆ ನೀರು ನುಗ್ಗಿದೆ. ಧಾರಾಕಾರ ಮಳೆಗೆ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಭಾಗದ ನದಿಗಳು ಉಕ್ಕಿಹರಿಯುತ್ತಿವೆ. ರಾಜ್ಯಾ

ಇನ್ನೂ ಹಲವು ದಿನಗಳ ಕಾಲ ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ ಕರಾವಳಿ ಸೇರಿದಂತೆ ವಿವಿಧೆಡೆ ಮುಂದಿನ ವಾರ ಭಾರೀ ಮಳೆ ಸುರಿಯುವ ಬಗ್ಗೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ (IMD) ಐದು ಜಿಲ್ಲೆಗಳಿಗೆ ಬುಧವಾರ ರೆಡ್‌ ಅಲರ್ಟ್‌ (Red alert) ಘೋಷಣೆ ಮಾಡಿದೆ. ರಾಜ್ಯಾ

ರಾಜ್ಯದ ಐದು ಜಿಲ್ಲೆಗಳಿಗೆ ಜುಲೈ 31ರಂದು ರೆಡ್‌ ಅಲರ್ಟ್‌

ದಕ್ಷಿಣಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ಜುಲೈ 31ರಂದು ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡದಲ್ಲಿ ಅಲರ್ಟ್ ಘೋಷಿಸಿದ ನಂತರ, ಜಿಲ್ಲಾಡಳಿತವು ಜುಲೈ 31ರಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಉತ್ತರಕನ್ನಡ, ಹಾಸನಕ್ಕೆ ಆರೆಂಜ್‌ ಅಲರ್ಟ್‌, ಬೆಳಗಾವಿ ಮತ್ತು ಮೈಸೂರು ಜಿಲ್ಲೆಗೆ ಇಂದು ಯೆಲ್ಲೋ ಅಲರ್ಟ್‌ (Yellow alert) ನೀಡಲಾಗಿದೆ. ಅಲ್ಲದೆ, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ದಕ್ಷಿಣ ರಾಜ್ಯದ 31 ಉಪ ವಿಭಾಗಗಳಲ್ಲಿ ಸಂಭಾವ್ಯ ಭೂಕುಸಿತದ ಬಗ್ಗೆ ಎಚ್ಚರಿಕೆ ನೀಡಿದೆ. ಆಗಸ್ಟ್‌ 1ರಂದು ಆರೆಂಜ್‌ ಅಲರ್ಟ್‌, ಆಗಸ್ಟ್‌ 2ರಂದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಇದನ್ನೂ ಓದಿ: ಬಿಜೆಪಿ, ಜೆಡಿಎಸ್ ನದ್ದು ಹಾದಿ ತಪ್ಪಿದ ಯಾತ್ರೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಬಂಡಾರಿ

ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬಾಗಲಕೋಟೆಯಲ್ಲೂ ಮಳೆಯಾಗಲಿದೆ. ಬೆಂಗಳೂರಿನಲ್ಲಿ ನಿನ್ನೆ ಭಾರಿ ಮಳೆ ಸುರಿದಿತ್ತು. ಇಂದೂ ಕೂಡ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ರಾಜ್ಯಾ

ಹಲವೆಡೆ ಶಾಲಾ-ಕಾಲೇಜಿಗೆ ರಜೆ ಘೋಷಣೆ
ಮುಂದಿನ 24 ಗಂಟೆ ಅವಧಿಯಲ್ಲಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಳೆ ಅಬ್ಬರ ಜಾಸ್ತಿ ಇರಲಿದೆ‌ ಎಂದು ಸೂಚನೆ ನೀಡಲಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣಕನ್ನಡದಲ್ಲಿ ರೆಡ್‌ ಅಲರ್ಟ್‌ ಘೋಷಿಸಿರುವ ಕಾರಣ ಅಂಗನವಾಡಿ, ಶಾಲೆ ಮತ್ತು ಕಾಲೇಜಿಗೆ ರಜೆ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ರಜೆ ಘೋಷಣೆ ಮಾಡಲಾಗಿದೆ. ಉಡುಪಿ, ಕಾಪು, ಕಾರ್ಕಳ ಮತ್ತು ಹೆಬ್ರಿ ತಾಲೂಕಿನ ವ್ಯಾಪ್ತಿಯ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿ ವರೆಗೆ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.

ದೇಶದ 20 ರಾಜ್ಯಗಳಲ್ಲಿ ಇಂದು ಭಾರೀ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

ಭಾರತೀಯ ಹವಾಮಾನ ಇಲಾಖೆ (IMD) ಕೇರಳವು ಮುಂದಿನ ಐದು ದಿನಗಳ ಕಾಲ ತೀವ್ರ ಮಳೆಯನ್ನು ಎದುರಿಸಲಿದೆ ಎಂದು ಮುನ್ಸೂಚನೆ ನೀಡಿದೆ. ತಿರುವನಂತಪುರಂ ಮತ್ತು ಪಾಲಕ್ಕಾಡ್ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ನೀಡಲಾಗಿದೆ. ಭೂಕುಸಿತವಾಗಿರುವ ವಯನಾಡು ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ಅಧಿಕಾರಿಗಳ ಪ್ರಕಟಣೆಯ ಪ್ರಕಾರ, ಕೊಟ್ಟಾಯಂ, ಕಾಸರಗೋಡು, ಕಣ್ಣೂರು, ವಯನಾಡ್, ಕೋಝಿಕ್ಕೋಡ್, ಮಲಪ್ಪುರಂ, ಪಾಲಕ್ಕಾಡ್, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್‌ನ ವೃತ್ತಿಪರ ಕಾಲೇಜುಗಳು ಸೇರಿದಂತೆ ಶಾಲೆಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.

ಆಗಸ್ಟ್ 1 ರಿಂದ 3ರ ವರೆಗೆ ಮಹಾರಾಷ್ಟ್ರದಲ್ಲಿ, ಜುಲೈ 30ರಿಂದ ಆಗಸ್ಟ್ 3ರ ವರೆಗೆ ಗೋವಾದಲ್ಲಿ, ಆಗಸ್ಟ್ 1ರಿಂದ 3ರ ವರೆಗೆ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಡದಲ್ಲಿ, ಜುಲೈ 30ರಿಂದ ಆಗಸ್ಟ್ 1ರ ವರೆಗೆ ಉತ್ತರಾಖಂಡದಲ್ಲಿ, ಪಂಜಾಬ್, ಹರಿಯಾಣ, ಚಂಡೀಗಢದಲ್ಲಿ ಜುಲೈ 31ರಿಂದ ಆಗಸ್ಟ್ 1ರ ವರೆಗೆ ಭಾರೀ ಮಳೆಯಾಗುವ ಬಗ್ಗೆ ಸೂಚನೆ ನೀಡಲಾಗಿದೆ.

ಇದನ್ನೂ ನೋಡಿ: ಶಿರಾಡಿಘಾಟ್​ನಲ್ಲಿ ಮತ್ತೆ ಗುಡ್ಡ ಕುಸಿತ -ಮಣ್ಣಿನಡಿ ಸಿಲುಕಿದ ವಾನಗಳು, ಹೆಚ್ಚಿದ ಆತಂಕJanashakthi Media

Donate Janashakthi Media

Leave a Reply

Your email address will not be published. Required fields are marked *