ಪಾಕಿಸ್ತಾನದ ಉತ್ತರಪಶ್ಚಿಮ ಭಾಗದಲ್ಲಿ ಸಂಭವಿಸಿದ ಭಾರೀ ಮಳೆ ಮತ್ತು ಗಾಳಿಯಿಂದಾಗಿ ಕನಿಷ್ಠ 25 ಮಂದಿ ಸಾವನ್ನಪ್ಪಿದ್ದು, 145ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಖೈಬರ್ ಪಖ್ತೂನ್ಖ್ವಾ ಪ್ರಾಂತ್ಯದ ಬನ್ನು, ಲಕ್ಕಿ ಮರ್ವತ್ ಮತ್ತು ಕರಕ್ ಜಿಲ್ಲೆಗಳಲ್ಲಿ ಮಳೆಯು ಮನೆಗಳ ಗೋಡೆಗಳು ಮತ್ತು ಛಾವಣಿಗಳನ್ನು ಕುಸಿತಗೊಳಿಸಿ ಈ ಅನಾಹುತಕ್ಕೆ ಕಾರಣವಾಗಿದೆ .
ಇದನ್ನು ಓದಿ :-ನವದೆಹಲಿ: ವಿವಧ ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಪ್ರಕಟಣೆ
ಮಳೆ ಮತ್ತು ಗಾಳಿಯಿಂದಾಗಿ ಮರಗಳು ಧರೆಗುರುಳಿದ್ದು, ವಿದ್ಯುತ್ ಕಂಬಗಳು ಉರುಳಿವೆ. ಸರ್ಕಾರಿ ಅಧಿಕಾರಿಗಳು ಗಾಯಾಳುಗಳಿಗೆ ತುರ್ತು ನೆರವು ಒದಗಿಸಲು ಕಾರ್ಯನಿರ್ವಹಿಸುತ್ತಿದ್ದಾರೆ. ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಶರೀಫ್ ಅವರು ಈ ದುರ್ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿ, ಪರಿಹಾರ ಕಾರ್ಯಾಚರಣೆಗಳನ್ನು ವೇಗವಾಗಿ ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ .
ಈ ಘಟನೆ ಪಾಕಿಸ್ತಾನದಲ್ಲಿ ಕಳೆದ ವರ್ಷ ಸಂಭವಿಸಿದ ಭಾರೀ ಮಳೆ ಮತ್ತು ಪ್ರವಾಹಗಳ ನಂತರದ ಮತ್ತೊಂದು ವಿಪತ್ತು. ಸರ್ಕಾರವು ಇಂತಹ ಪ್ರಕೃತಿ ವಿಪತ್ತುಗಳ ಪರಿಣಾಮವನ್ನು ತಗ್ಗಿಸಲು ರಾಷ್ಟ್ರೀಯ ಬಜೆಟ್ನಲ್ಲಿ ಹವಾಮಾನ ಪ್ರತಿರೋಧಕತೆಗೆ 1.3 ಬಿಲಿಯನ್ ಅಮೆರಿಕನ್ ಡಾಲರ್ಗಳನ್ನು ಮೀಸಲಿಟ್ಟಿದೆ .
ಇದನ್ನು ಓದಿ :-ನವದೆಹಲಿ: ವಿವಧ ರಾಜ್ಯಗಳ 5 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಪ್ರಕಟಣೆ
ಈ ಮಧ್ಯೆ, ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ಬಿಪರ್ಜೋಯ್ ಚಂಡಮಾರುತವು ಪಾಕಿಸ್ತಾನದ ದಕ್ಷಿಣ ಭಾಗದತ್ತ ಸಾಗುತ್ತಿದೆ ಎಂದು ಪಾಕಿಸ್ತಾನದ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ. ಪ್ರಧಾನಿ ಶರೀಫ್ ಅವರು ಈ ಚಂಡಮಾರುತದ ಹಿನ್ನೆಲೆಯಲ್ಲಿ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.